ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ನಗರಸಭೆ ಪೌರಾಯುಕ್ತರ ವರ್ಗಾವಣೆ

Last Updated 11 ಮೇ 2022, 13:03 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ನಗರಸಭೆ ಪೌರಾಯುಕ್ತರಾಗಿದ್ದ ಮನ್ಸೂರ್‌ ಅಲಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಒಂದು ಕಾಲು ವರ್ಷದ ಹಿಂದೆ ಮನ್ಸೂರ್‌ ಅಲಿ ಪೌರಾಯುಕ್ತರಾಗಿ ನೇಮಕಗೊಂಡಿದ್ದರು. ಸರ್ಕಾರ ಅವರನ್ನು ವರ್ಗಾವಣೆಗೊಳಿಸಿದರೂ ಹೊಸ ಸ್ಥಳ ತೋರಿಸಿಲ್ಲ. ಅಲಿ ಅವರ ಜಾಗಕ್ಕೆ ಬಳ್ಳಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎಸ್‌. ರಮೇಶ ಅವರನ್ನು ಪೌರಾಯುಕ್ತರಾಗಿ ನೇಮಕಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್‌. ಪ್ರಸಾದ್‌ ಆದೇಶ ಹೊರಡಿಸಿದ್ದಾರೆ.

ಹೊಸಪೇಟೆ ನಗರಸಭೆಗೆ ಪೌರಾಯುಕ್ತರಾಗಿ ನೇಮಕಗೊಳ್ಳುವವರು ಎರಡು ವರ್ಷಕ್ಕಿಂತ ಹೆಚ್ಚು ಅವಧಿಗೆ ಇರುತ್ತಿಲ್ಲ. ಈ ಹಿಂದೆ ಪಿ. ಜಯಲಕ್ಷ್ಮಿ ಅವರನ್ನು ಒಂದುವರೆ ವರ್ಷದೊಳಗೆ ವರ್ಗಾವಣೆಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT