<p><strong>ಹೊಸಪೇಟೆ (ವಿಜಯನಗರ):</strong> ನಗರದ ಹೃದಯ ಭಾಗದಲ್ಲಿರುವ ಶ್ರೀರಾಮುಲು ಉದ್ಯಾನದಲ್ಲಿ ಶುಕ್ರವಾರ ಬೆಳಿಗ್ಗೆಯೇ ಎರಡು ಕರಡಿಗಳು ಓಡಾಡಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಕರಡಿಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭವಾಗಿದೆ.</p><p>ರಾಣಿಪೇಟೆಯ ಮನೆಯೊಂದರ ಅಂಗಳದಲ್ಲಿ ಒಂದು ತಾಯಿ ಮತ್ತು ಮರಿ ಕರಡಿಗಳು ಆಡುತ್ತಿರುವುದನ್ನು ಮಹಿಳೆಯೊಬ್ಬರು ನಸುಕಿನ 4.30ರ ವೇಳೆಗೆ ಕಂಡಿದ್ದರು. ಈ ಪೈಕಿ ಒಂದು ಕರಡಿ ಸಮೀಪದ ಶ್ರೀರಾಮುಲು ಉದ್ಯಾನದಲ್ಲಿ ತಿರುಗಾಡಿದೆ. ಕೆಲವರು ಅದರ ವಿಡಿಯೊ ಚಿತ್ರೀಕರಣ ಸಹ ಮಾಡಿದ್ದಾರೆ.</p><p>ಜನ ಗುಂಪುಗೂಡುತ್ತಿದ್ದಂತೆಯೇ ಆತಂಕಗೊಂಡ ಕರಡಿ ಉದ್ಯಾನ ಹಿಂಭಾಗದ, ತೋಟಗಾರಿಕೆ ಇಲಾಖೆಗೆ ಒಳಪಟ್ಟ ಸ್ಥಳದಲ್ಲಿನ ಪೊದೆಯಲ್ಲಿ ಅಡಗಿ ಕುಳಿತಿದೆ. ಇನ್ನೊಂದು ಮರಿ ಸಹ ಅಲ್ಲೇ ಇದೆಯೋ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.</p><p>ಅರಣ್ಯ ಇಲಾಖೆ ಸಿಬ್ಬಂದಿ ಬೆಳಿಗ್ಗೆ 5.30ರ ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದರು. ಆದರೆ ಕರಡಿ ಸೆರೆಹಿಡಿಯುವ ಪರಿಕರಗಳು ಇರಲಿಲ್ಲ. ಕಮಲಾಪುರದಿಂದ ಅವುಗಳನ್ನು ತರಿಸಿಕೊಳ್ಳುವ ಹೊತ್ತಿಗೆ ಬೆಳಿಗ್ಗೆ 7.30 ಕಳೆದಿತ್ತು.</p><p>ಬಲೆ, ಬೋನು, ಅರಿವಳಿಕೆ ಇಂಜೆಕ್ಷನ್ ನೀಡುವ ಗನ್ ಸಹಿತ ಬಂದಿರುವ ಸಿಬ್ಬಂದಿ ಇದೀಗ ಕರಡಿ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p><p><strong>ಎರಡನೇ ಘಟನೆ:</strong> ಎರಡು ವರ್ಷದ ಹಿಂದೆ ರಾಣಿಪೇಟೆ ಪ್ರದೇಶಕ್ಕೆ ಕರಡಿಯೊಂದು ಬಂದಿತ್ತು. ಮನೆಯ ತಾರಸಿ ಮೇಲೆ ಬಂದಿದ್ದ ಅದನ್ನು ಅರಿವಳಿಕೆ ಇಂಜೆಕ್ಷನ್ ನೀಡಿ ಬಳಿಕ ಸೆರೆ ಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನಗರದ ಹೃದಯ ಭಾಗದಲ್ಲಿರುವ ಶ್ರೀರಾಮುಲು ಉದ್ಯಾನದಲ್ಲಿ ಶುಕ್ರವಾರ ಬೆಳಿಗ್ಗೆಯೇ ಎರಡು ಕರಡಿಗಳು ಓಡಾಡಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಕರಡಿಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಆರಂಭವಾಗಿದೆ.</p><p>ರಾಣಿಪೇಟೆಯ ಮನೆಯೊಂದರ ಅಂಗಳದಲ್ಲಿ ಒಂದು ತಾಯಿ ಮತ್ತು ಮರಿ ಕರಡಿಗಳು ಆಡುತ್ತಿರುವುದನ್ನು ಮಹಿಳೆಯೊಬ್ಬರು ನಸುಕಿನ 4.30ರ ವೇಳೆಗೆ ಕಂಡಿದ್ದರು. ಈ ಪೈಕಿ ಒಂದು ಕರಡಿ ಸಮೀಪದ ಶ್ರೀರಾಮುಲು ಉದ್ಯಾನದಲ್ಲಿ ತಿರುಗಾಡಿದೆ. ಕೆಲವರು ಅದರ ವಿಡಿಯೊ ಚಿತ್ರೀಕರಣ ಸಹ ಮಾಡಿದ್ದಾರೆ.</p><p>ಜನ ಗುಂಪುಗೂಡುತ್ತಿದ್ದಂತೆಯೇ ಆತಂಕಗೊಂಡ ಕರಡಿ ಉದ್ಯಾನ ಹಿಂಭಾಗದ, ತೋಟಗಾರಿಕೆ ಇಲಾಖೆಗೆ ಒಳಪಟ್ಟ ಸ್ಥಳದಲ್ಲಿನ ಪೊದೆಯಲ್ಲಿ ಅಡಗಿ ಕುಳಿತಿದೆ. ಇನ್ನೊಂದು ಮರಿ ಸಹ ಅಲ್ಲೇ ಇದೆಯೋ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.</p><p>ಅರಣ್ಯ ಇಲಾಖೆ ಸಿಬ್ಬಂದಿ ಬೆಳಿಗ್ಗೆ 5.30ರ ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದರು. ಆದರೆ ಕರಡಿ ಸೆರೆಹಿಡಿಯುವ ಪರಿಕರಗಳು ಇರಲಿಲ್ಲ. ಕಮಲಾಪುರದಿಂದ ಅವುಗಳನ್ನು ತರಿಸಿಕೊಳ್ಳುವ ಹೊತ್ತಿಗೆ ಬೆಳಿಗ್ಗೆ 7.30 ಕಳೆದಿತ್ತು.</p><p>ಬಲೆ, ಬೋನು, ಅರಿವಳಿಕೆ ಇಂಜೆಕ್ಷನ್ ನೀಡುವ ಗನ್ ಸಹಿತ ಬಂದಿರುವ ಸಿಬ್ಬಂದಿ ಇದೀಗ ಕರಡಿ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p><p><strong>ಎರಡನೇ ಘಟನೆ:</strong> ಎರಡು ವರ್ಷದ ಹಿಂದೆ ರಾಣಿಪೇಟೆ ಪ್ರದೇಶಕ್ಕೆ ಕರಡಿಯೊಂದು ಬಂದಿತ್ತು. ಮನೆಯ ತಾರಸಿ ಮೇಲೆ ಬಂದಿದ್ದ ಅದನ್ನು ಅರಿವಳಿಕೆ ಇಂಜೆಕ್ಷನ್ ನೀಡಿ ಬಳಿಕ ಸೆರೆ ಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>