ಎಸ್ಸೆಸ್ಸೆಲ್ಸಿಯಲ್ಲಿ ಶೇ 94.8, ಪಿಯುಸಿಯಲ್ಲಿ ಶೇ 99ರಷ್ಟು ಅಂಕ ಗಳಿಸಿರುವ ವಿಧಿ ಕುಮಾರಿ ಅವರು ಆಚಾರ್ಯ ಭಗವಂತ ನರರತ್ನ ಸೂರಿಶ್ವರಜೀ ಮಹಾರಾಜ ಅವರ ಸಾನ್ನಿಧ್ಯದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸುವರು. ಶ್ರೀ ಆದಿನಾಥ ಜೈನ ಶ್ವೇತಾಂಬರ ಸಂಘದಿಂದ ನಗರದಲ್ಲಿ ಜ. 17 ಹಾಗೂ 18ರಂದು ಪ್ರಥಮ ಜೈನ ದೀಕ್ಷಾ ಸಮಾರಂಭ ಆಯೋಜಿಸಲಾಗಿದೆ. ಜ. 17ರಂದು ವಿಧಿ ಕುಮಾರಿ ಶೋಭಾಯಾತ್ರೆ ನಡೆಯಲಿದೆ. ಮರುದಿನ ನರರತ್ನ ಮಹಾರಾಜರು ದೀಕ್ಷೆ ನೀಡುವರು.