<p>ಹೊಸಪೇಟೆ(ವಿಜಯನಗರ): ಮಾಹಿತಿ ಕೇವಲ ಮಾಹಿತಿ ಆಗಿ ಉಳಿಯದೇ, ಅದು ಜ್ಞಾನವಾಗಿ ಪರಿವರ್ತನೆಯಾಗಬೇಕು. ಅದೇ ಜ್ಞಾನವೇ ವ್ಯಕ್ತಿಯ ನಿಜವಾದ ಆಸ್ತಿ ಎಂದು ಸಹಾಯಕ ಕುಲಸಚಿವ ಎಚ್.ಎನ್.ಸುಬ್ರಮಣ್ಯ ಹೇಳಿದರು.</p>.<p>ಸಮೀಪದ ಹಂಪಿ ಕನ್ನಡ ವಿವಿಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ಕಾಯ್ದೆ-2005ರ ಜಾಗೃತಿ ಮತ್ತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು</p>.<p>ಇಂದಿನ ಕಾಲದಲ್ಲಿ ನಮಗೆ ಅಗತ್ಯವಾದ ಮಾಹಿತಿಯು ಬಹುಪಾಲು ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗುತ್ತಿದೆ. ಮಾಹಿತಿಯನ್ನು ಯಾವ ಸಂದರ್ಭದಲ್ಲಿ, ಯಾವ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂಬ ಅರಿವು ಅಗತ್ಯವಾಗಿದೆ ಎಂದರು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅತ್ಯಂತ ಅಗತ್ಯವಾಗಿದೆ, ಸರಳವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಾಗೂ ಅನಾಹುತಗಳನ್ನು ತಪ್ಪಿಸಲು ಕಾನೂನಿನ ಕುರಿತು ಸಮಗ್ರ ತಿಳುವಳಿಕೆ ಇರಬೇಕು ಎಂದರು.</p>.<p>ಶಕುಂತಲಾ ಚೌಡನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಉಪಕುಲಸಚಿವ ಬಿ.ಗುರುಬಸಪ್ಪ, ಆರ್.ವಿ.ದೇಶಪಾಂಡೆ, ಎಚ್.ಶ್ರೀನಿವಾಸ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-25-1948741353</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ(ವಿಜಯನಗರ): ಮಾಹಿತಿ ಕೇವಲ ಮಾಹಿತಿ ಆಗಿ ಉಳಿಯದೇ, ಅದು ಜ್ಞಾನವಾಗಿ ಪರಿವರ್ತನೆಯಾಗಬೇಕು. ಅದೇ ಜ್ಞಾನವೇ ವ್ಯಕ್ತಿಯ ನಿಜವಾದ ಆಸ್ತಿ ಎಂದು ಸಹಾಯಕ ಕುಲಸಚಿವ ಎಚ್.ಎನ್.ಸುಬ್ರಮಣ್ಯ ಹೇಳಿದರು.</p>.<p>ಸಮೀಪದ ಹಂಪಿ ಕನ್ನಡ ವಿವಿಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ಕಾಯ್ದೆ-2005ರ ಜಾಗೃತಿ ಮತ್ತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು</p>.<p>ಇಂದಿನ ಕಾಲದಲ್ಲಿ ನಮಗೆ ಅಗತ್ಯವಾದ ಮಾಹಿತಿಯು ಬಹುಪಾಲು ಸಾಮಾಜಿಕ ಜಾಲತಾಣಗಳ ಮೂಲಕ ಲಭ್ಯವಾಗುತ್ತಿದೆ. ಮಾಹಿತಿಯನ್ನು ಯಾವ ಸಂದರ್ಭದಲ್ಲಿ, ಯಾವ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂಬ ಅರಿವು ಅಗತ್ಯವಾಗಿದೆ ಎಂದರು.</p>.<p>ಕುಲಸಚಿವ ಪ್ರೊ.ವಿರೂಪಾಕ್ಷಿ ಪೂಜಾರಹಳ್ಳಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅತ್ಯಂತ ಅಗತ್ಯವಾಗಿದೆ, ಸರಳವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಾಗೂ ಅನಾಹುತಗಳನ್ನು ತಪ್ಪಿಸಲು ಕಾನೂನಿನ ಕುರಿತು ಸಮಗ್ರ ತಿಳುವಳಿಕೆ ಇರಬೇಕು ಎಂದರು.</p>.<p>ಶಕುಂತಲಾ ಚೌಡನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಉಪಕುಲಸಚಿವ ಬಿ.ಗುರುಬಸಪ್ಪ, ಆರ್.ವಿ.ದೇಶಪಾಂಡೆ, ಎಚ್.ಶ್ರೀನಿವಾಸ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-25-1948741353</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>