<p><strong>ಹೊಸಪೇಟೆ:</strong> ನಗರದ ಅನಂತಶಯನ ಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿರುವುದನ್ನು ವಿರೋಧಿಸಿದ ಸ್ವತಃ ಶಾಸಕ ಎಚ್.ಆರ್.ಗವಿಯಪ್ಪ ಅವರೇ ಪ್ರತಿಭಟನೆಗೆ ಇಳಿದ ಪ್ರಸಂಗ ಬುಧವಾರ ನಡೆಯಿತು.</p>.<p>‘ಮೇಲ್ಸೇತುವೆ ನಿರ್ಮಾಣಕ್ಕೆ ಇದ್ದ ಕೆಲವು ತೊಡಕುಗಳನ್ನು ನಿವಾರಿಸಿದ ಮೇಲೂ ವಿಳಂಬ ಏಕೆ ಎಂದು ಪ್ರಶ್ನಿಸಿದ ಶಾಸಕರು, ಸ್ಥಳಕ್ಕೆ ರೈಲ್ವೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಕರೆಸಿ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ಶ್ರುತಿ ಅವರ ಸಮ್ಮುಖದಲ್ಲೇ ತರಾಟೆಗೆ ತೆಗೆದುಕೊಂಡರು.</p>.<p>‘ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಬಿಟ್ಟು ಹೋಗಿ‘ ಎಂದು ಎಚ್ಚರಿಕೆ ನೀಡಿದರು.</p>.<p>ಡಿವೈಎಸ್ಪಿ ಮುರಳೀಧರ, ಮುಖಂಡರಾದ ಅಯ್ಯಾಳಿ ತಿಮ್ಮಪ್ಪ, ಗಿಂಜಿ ಮಂಜು, ಗುಜ್ಜಲ ನಿಂಗಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-380604774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ನಗರದ ಅನಂತಶಯನ ಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಬಹಳ ನಿಧಾನಗತಿಯಲ್ಲಿ ನಡೆಯುತ್ತಿರುವುದನ್ನು ವಿರೋಧಿಸಿದ ಸ್ವತಃ ಶಾಸಕ ಎಚ್.ಆರ್.ಗವಿಯಪ್ಪ ಅವರೇ ಪ್ರತಿಭಟನೆಗೆ ಇಳಿದ ಪ್ರಸಂಗ ಬುಧವಾರ ನಡೆಯಿತು.</p>.<p>‘ಮೇಲ್ಸೇತುವೆ ನಿರ್ಮಾಣಕ್ಕೆ ಇದ್ದ ಕೆಲವು ತೊಡಕುಗಳನ್ನು ನಿವಾರಿಸಿದ ಮೇಲೂ ವಿಳಂಬ ಏಕೆ ಎಂದು ಪ್ರಶ್ನಿಸಿದ ಶಾಸಕರು, ಸ್ಥಳಕ್ಕೆ ರೈಲ್ವೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಕರೆಸಿ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ಶ್ರುತಿ ಅವರ ಸಮ್ಮುಖದಲ್ಲೇ ತರಾಟೆಗೆ ತೆಗೆದುಕೊಂಡರು.</p>.<p>‘ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಬಿಟ್ಟು ಹೋಗಿ‘ ಎಂದು ಎಚ್ಚರಿಕೆ ನೀಡಿದರು.</p>.<p>ಡಿವೈಎಸ್ಪಿ ಮುರಳೀಧರ, ಮುಖಂಡರಾದ ಅಯ್ಯಾಳಿ ತಿಮ್ಮಪ್ಪ, ಗಿಂಜಿ ಮಂಜು, ಗುಜ್ಜಲ ನಿಂಗಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-25-380604774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>