<p><strong>ಹೂವಿನಹಡಗಲಿ</strong>: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಶಾಸಕ ಕೃಷ್ಣನಾಯ್ಕ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಉಡುಪಿ, ದಕ್ಷಿಣ ಕನ್ನಡದಲ್ಲಿ ರಾಜಕೀಯ ದುರುದ್ದೇಶದಿಂದ ಬಿಜೆಪಿ, ಆರ್ಎಸ್ಎಸ್ ಮುಖಂಡರ ಮೇಲೆ ಕೇಸ್ ಹಾಕಿ ಹೆದರಿಸುತ್ತಿರುವುದು ಖಂಡನೀಯ’ ಎಂದರು.</p>.<p>‘ರಾಜ್ಯ ಸರ್ಕಾರದ ಎಲ್ಲ ಸಚಿವರು ಹಿಟ್ಲರ್ ಆಡಳಿತ ಶುರುವಿಟ್ಟುಕೊಂಡಿದ್ದಾರೆ. ವಿರೋಧ ಪಕ್ಷದ ನಾಯಕರ ಮೇಲೂ ದಬ್ಬಾಳಿಕೆ ನಡೆಸುತ್ತಿದ್ದಾರೆ. ಎರಡು ವರ್ಷವಾದರೂ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಅನುದಾನ ನೀಡಿಲ್ಲ. ಇವರ ದುರಾಡಳಿತದಿಂದ ರಾಜ್ಯದ ಅಭಿವೃದ್ಧಿ 10 ವರ್ಷ ಹಿಂದೆ ಬಿದ್ದಿದೆ’ ಎಂದು ಟೀಕಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಂಜೀವರೆಡ್ಡಿ ಮಾತನಾಡಿ, ‘ಸಮುದಾಯವೊಂದರ ಓಲೈಕೆಗಾಗಿ ಸರ್ಕಾರ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡು ಆರ್ ಎಸ್ಎಸ್, ಸಂಘ ಪರಿವಾರದ ಮುಖಂಡರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ’ ಎಂದರು.</p>.<p>‘ನಟ ಕಮಲ್ ಹಾಸನ್ ಕನ್ನಡದ ಅಸ್ಮಿತೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದರೂ ಅವರು ಮಿತ್ರ ಪಕ್ಷದವರು ಎಂಬ ಕಾರಣಕ್ಕೆ ಸಿಎಂ, ಡಿಸಿಎಂ ತುಟಿ ಬಿಚ್ಚಲಿಲ್ಲ. ಕನ್ನಡಕ್ಕಿಂತ ನಿಮಗೆ ಪಕ್ಷದ ತತ್ವ ಸಿದ್ದಾಂತ ಮುಖ್ಯವೇ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ಹರಿಹಾಯ್ದರು.</p>.<p>ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಮುಖಂಡರಾದ ಈಟಿ ಲಿಂಗರಾಜ, ಮಲ್ಲಿಕಾರ್ಜುನ ಪೂಜಾರ್, ಬೀರಬ್ಬಿ ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಶಾಸಕ ಕೃಷ್ಣನಾಯ್ಕ ಆರೋಪಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ ಉಡುಪಿ, ದಕ್ಷಿಣ ಕನ್ನಡದಲ್ಲಿ ರಾಜಕೀಯ ದುರುದ್ದೇಶದಿಂದ ಬಿಜೆಪಿ, ಆರ್ಎಸ್ಎಸ್ ಮುಖಂಡರ ಮೇಲೆ ಕೇಸ್ ಹಾಕಿ ಹೆದರಿಸುತ್ತಿರುವುದು ಖಂಡನೀಯ’ ಎಂದರು.</p>.<p>‘ರಾಜ್ಯ ಸರ್ಕಾರದ ಎಲ್ಲ ಸಚಿವರು ಹಿಟ್ಲರ್ ಆಡಳಿತ ಶುರುವಿಟ್ಟುಕೊಂಡಿದ್ದಾರೆ. ವಿರೋಧ ಪಕ್ಷದ ನಾಯಕರ ಮೇಲೂ ದಬ್ಬಾಳಿಕೆ ನಡೆಸುತ್ತಿದ್ದಾರೆ. ಎರಡು ವರ್ಷವಾದರೂ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಅನುದಾನ ನೀಡಿಲ್ಲ. ಇವರ ದುರಾಡಳಿತದಿಂದ ರಾಜ್ಯದ ಅಭಿವೃದ್ಧಿ 10 ವರ್ಷ ಹಿಂದೆ ಬಿದ್ದಿದೆ’ ಎಂದು ಟೀಕಿಸಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಂಜೀವರೆಡ್ಡಿ ಮಾತನಾಡಿ, ‘ಸಮುದಾಯವೊಂದರ ಓಲೈಕೆಗಾಗಿ ಸರ್ಕಾರ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಂಡು ಆರ್ ಎಸ್ಎಸ್, ಸಂಘ ಪರಿವಾರದ ಮುಖಂಡರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ’ ಎಂದರು.</p>.<p>‘ನಟ ಕಮಲ್ ಹಾಸನ್ ಕನ್ನಡದ ಅಸ್ಮಿತೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದರೂ ಅವರು ಮಿತ್ರ ಪಕ್ಷದವರು ಎಂಬ ಕಾರಣಕ್ಕೆ ಸಿಎಂ, ಡಿಸಿಎಂ ತುಟಿ ಬಿಚ್ಚಲಿಲ್ಲ. ಕನ್ನಡಕ್ಕಿಂತ ನಿಮಗೆ ಪಕ್ಷದ ತತ್ವ ಸಿದ್ದಾಂತ ಮುಖ್ಯವೇ ಎಂಬುದನ್ನು ಸ್ಪಷ್ಟಪಡಿಸಿ’ ಎಂದು ಹರಿಹಾಯ್ದರು.</p>.<p>ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಮುಖಂಡರಾದ ಈಟಿ ಲಿಂಗರಾಜ, ಮಲ್ಲಿಕಾರ್ಜುನ ಪೂಜಾರ್, ಬೀರಬ್ಬಿ ಬಸವರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>