<p>ಹೂವಿನಹಡಗಲಿ: ತಾಲ್ಲೂಕಿನ ದಾಸನಹಳ್ಳಿ ಕೆರೆ ಒತ್ತುವರಿ ತೆರವುಗೊಳಿಸುವುದು, ಭೂಮಾಪನ ಇಲಾಖೆಯವರು ಕೆಲ ವರ್ಷಗಳಿಂದ ಬಾಕಿ ಉಳಿಸಿರುವ ಭೂ ಸರ್ವೆ ಕಾರ್ಯಕ್ಕೆ ಒತ್ತಾಯಿಸಿ ಮೇ 4ರಂದು ಹೊಳಲು ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರತ್ನಭಾರತ ರೈತ ಸಮಾಜದ ಅಧ್ಯಕ್ಷ ಕೋಡಬಾಳ ಚಂದ್ರಪ್ಪ ತಿಳಿಸಿದ್ದಾರೆ.</p>.<p>ದಾಸನಹಳ್ಳಿ ಕೆರೆ ಸರ್ವೇ ಮಾಡಿಸಿ ಒತ್ತುವರಿ ತೆರವುಗೊಳಿಸಬೇಕು. ಕೆರೆ ತುಂಬಿಸುವ ಯೋಜನೆಗಾಗಿ ತೋಡಿರುವ ಪೈಪ್ಲೈನ್ನಿಂದ ರೈತರ ಹೊಲಗಳಲ್ಲಿ ಬಿದ್ದಿರುವ ಕಂದಕಗಳನ್ನು ಸಮತಟ್ಟು ಮಾಡಿಸಬೇಕು. ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣ ನೀಡಬೇಕು. ಭೂ ಸರ್ವೇಗೆ ಅರ್ಜಿ ಸಲ್ಲಿಸಿ 2-3 ವರ್ಷಗಳಾದರೂ ಇನ್ನು ಪ್ರಕ್ರಿಯೆ ನಡೆಸಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಹೊಳಲು ಗ್ರಾಮದ ಸಿಂಹಾಸನ ಕಟ್ಟೆ ಬಳಿ ರೈತರೊಂದಿಗೆ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1307293374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ತಾಲ್ಲೂಕಿನ ದಾಸನಹಳ್ಳಿ ಕೆರೆ ಒತ್ತುವರಿ ತೆರವುಗೊಳಿಸುವುದು, ಭೂಮಾಪನ ಇಲಾಖೆಯವರು ಕೆಲ ವರ್ಷಗಳಿಂದ ಬಾಕಿ ಉಳಿಸಿರುವ ಭೂ ಸರ್ವೆ ಕಾರ್ಯಕ್ಕೆ ಒತ್ತಾಯಿಸಿ ಮೇ 4ರಂದು ಹೊಳಲು ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ರತ್ನಭಾರತ ರೈತ ಸಮಾಜದ ಅಧ್ಯಕ್ಷ ಕೋಡಬಾಳ ಚಂದ್ರಪ್ಪ ತಿಳಿಸಿದ್ದಾರೆ.</p>.<p>ದಾಸನಹಳ್ಳಿ ಕೆರೆ ಸರ್ವೇ ಮಾಡಿಸಿ ಒತ್ತುವರಿ ತೆರವುಗೊಳಿಸಬೇಕು. ಕೆರೆ ತುಂಬಿಸುವ ಯೋಜನೆಗಾಗಿ ತೋಡಿರುವ ಪೈಪ್ಲೈನ್ನಿಂದ ರೈತರ ಹೊಲಗಳಲ್ಲಿ ಬಿದ್ದಿರುವ ಕಂದಕಗಳನ್ನು ಸಮತಟ್ಟು ಮಾಡಿಸಬೇಕು. ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣ ನೀಡಬೇಕು. ಭೂ ಸರ್ವೇಗೆ ಅರ್ಜಿ ಸಲ್ಲಿಸಿ 2-3 ವರ್ಷಗಳಾದರೂ ಇನ್ನು ಪ್ರಕ್ರಿಯೆ ನಡೆಸಿಲ್ಲ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಈ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಹೊಳಲು ಗ್ರಾಮದ ಸಿಂಹಾಸನ ಕಟ್ಟೆ ಬಳಿ ರೈತರೊಂದಿಗೆ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1307293374</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>