<p>ಹೂವಿನಹಡಗಲಿ: ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಶುಕ್ರವಾರ ಬೈಕ್ ಸವಾರರಿಗೆ ಹೆಲ್ಮೆಟ್ ಜಾಗೃತಿ ಮೂಡಿಸಲಾಯಿತು.</p>.<p>ಹಳೇ ಬಸ್ ನಿಲ್ದಾಣ, ಶಾಸ್ತ್ರಿ ಸರ್ಕಲ್, ಪೊಲೀಸ್ ಠಾಣೆ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳನ್ನು ತಡೆದು ಜಾಗೃತಿ ಮೂಡಿಸಲಾಯಿತು. ಕೆಲವರಿಗೆ ಹೆಲ್ಮೆಟ್ ವಿತರಿಸಿ ಅರಿವು ಮೂಡಿಸಲಾಯಿತು.</p>.<p>‘ಬಿಸಿಲು ಕಾಲದಲ್ಲಿ ಹೆಲ್ಮೆಟ್ ಧರಿಸುವುದರಿಂದ ಆರೋಗ್ಯಕ್ಕೆ ತೊಂದರೆಯಾಗುತ್ತದೆ ಎಂಬುದು ತಪ್ಪು ಕಲ್ಪನೆ. ಅಪಘಾತ ಸಂದರ್ಭಗಳಲ್ಲಿ ತಲೆಗೆ ಪೆಟ್ಟು ಬೀಳುವುದರಿಂದಲೇ ಹೆಚ್ಚಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಬೈಕ್ ಚಾಲನೆಯಲ್ಲಿ ಹೆಲ್ಮೆಟ್ ಧರಿಸುವುದು ಪ್ರಾಣ ರಕ್ಷಣೆಗೆ ರಕ್ಷಾ ಕವಚವಾಗಲಿದೆ’ ಎಂದು ಪಿಎಸ್ಐ ಮಣಿಕಂಠ ಹೇಳಿದರು.</p>.<p>ಎಎಸ್ಐ ನಂದಿನಿ, ಕಾನ್ಸ್ಟೆಬಲ್ ಗುರುಬಸವರಾಜ, ಪರಶುರಾಮ, ಖಲಂದರ್, ಪ್ರಭಣ್ಣ, ಮಲ್ಲೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-25-1929086814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ಪಟ್ಟಣದಲ್ಲಿ ಪೊಲೀಸ್ ಇಲಾಖೆಯಿಂದ ಶುಕ್ರವಾರ ಬೈಕ್ ಸವಾರರಿಗೆ ಹೆಲ್ಮೆಟ್ ಜಾಗೃತಿ ಮೂಡಿಸಲಾಯಿತು.</p>.<p>ಹಳೇ ಬಸ್ ನಿಲ್ದಾಣ, ಶಾಸ್ತ್ರಿ ಸರ್ಕಲ್, ಪೊಲೀಸ್ ಠಾಣೆ ಮುಂಭಾಗದಲ್ಲಿ ದ್ವಿಚಕ್ರ ವಾಹನಗಳನ್ನು ತಡೆದು ಜಾಗೃತಿ ಮೂಡಿಸಲಾಯಿತು. ಕೆಲವರಿಗೆ ಹೆಲ್ಮೆಟ್ ವಿತರಿಸಿ ಅರಿವು ಮೂಡಿಸಲಾಯಿತು.</p>.<p>‘ಬಿಸಿಲು ಕಾಲದಲ್ಲಿ ಹೆಲ್ಮೆಟ್ ಧರಿಸುವುದರಿಂದ ಆರೋಗ್ಯಕ್ಕೆ ತೊಂದರೆಯಾಗುತ್ತದೆ ಎಂಬುದು ತಪ್ಪು ಕಲ್ಪನೆ. ಅಪಘಾತ ಸಂದರ್ಭಗಳಲ್ಲಿ ತಲೆಗೆ ಪೆಟ್ಟು ಬೀಳುವುದರಿಂದಲೇ ಹೆಚ್ಚಾಗಿ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಬೈಕ್ ಚಾಲನೆಯಲ್ಲಿ ಹೆಲ್ಮೆಟ್ ಧರಿಸುವುದು ಪ್ರಾಣ ರಕ್ಷಣೆಗೆ ರಕ್ಷಾ ಕವಚವಾಗಲಿದೆ’ ಎಂದು ಪಿಎಸ್ಐ ಮಣಿಕಂಠ ಹೇಳಿದರು.</p>.<p>ಎಎಸ್ಐ ನಂದಿನಿ, ಕಾನ್ಸ್ಟೆಬಲ್ ಗುರುಬಸವರಾಜ, ಪರಶುರಾಮ, ಖಲಂದರ್, ಪ್ರಭಣ್ಣ, ಮಲ್ಲೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-25-1929086814</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>