ಹೂವಿನಹಡಗಲಿ: ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಪಟ್ಟಣ ಠಾಣೆಯ ಪಿಎಸ್ಐ ಎಸ್.ಪಿ.ನಾಯ್ಕ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್ ಅಮಾನತುಗೊಳಿಸಿದ್ದಾರೆ.
‘ಕರ್ತವ್ಯ ನಿರ್ಲಕ್ಷ್ಯ, ಅವಾಚ್ಯ ಪದಗಳ ನಿಂದನೆ, ಅಧಿಕಾರ ದುರುಪಯೋಗ ಕುರಿತು ಸಾರ್ವಜನಿಕರು ನೀಡಿದ ದೂರು ಆಧರಿಸಿ ಪಿಎಸ್ಐ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ’ ಎಂದು ಆದೇಶದಲ್ಲಿ ಎಸ್ಪಿ ತಿಳಿಸಿದ್ದಾರೆ.