<p><strong>ಹೂವಿನಹಡಗಲಿ:</strong> ತಾಲ್ಲೂಕಿನ ಉತ್ತಂಗಿ ಗ್ರಾಮದ ಹತ್ತಿರ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ದುರಸ್ತಿ ಕಾಮಗಾರಿ ಅರಬರೆಯಾಗಿದ್ದು, ಇಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದರೂ ಯಾರೂ ಗಮನಹರಿಸುತ್ತಿಲ್ಲ ಎಂದು ಉತ್ತಂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯ ಹೆದ್ದಾರಿಯಲ್ಲಿ ಗುಂಡಿಬಿದ್ದು ಹಾಳಾಗಿರುವ ಆಯ್ದ ಭಾಗಗಳ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಉತ್ತಂಗಿಯ ತೀರ್ಥರಾಮೇಶ್ವರ ಪ್ಲಾಟ್ ಬಳಿ ಅರ್ಧ ಕಿ.ಮೀ. ಹಾಗೂ ಉತ್ತಂಗಿ ಕ್ರಾಸ್ ಬಳಿ 50 ಮೀಟರ್ನಷ್ಟು ರಸ್ತೆಯನ್ನು ಅಗೆಯಲಾಗಿದೆ. ಆರು ತಿಂಗಳ ರಸ್ತೆಗೆ ಜಲ್ಲಿಕಲ್ಲು ಸುರಿದು ಹಾಗೇ ಬಿಟ್ಟಿರುವುದರಿಂದ ಈ ಸ್ಥಳದಲ್ಲಿ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿವೆ.</p>.<p>ಏ. 9ರಂದು ತೀರ್ಥರಾಮೇಶ್ವರ ಪ್ಲಾಟ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರೊಂದು ರಸ್ತೆ ಬದಿಗೆ ಪಲ್ಟಿಯಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದರು.</p>.<p>ಈಚೆಗೆ ಅದೇ ಸ್ಥಳದಲ್ಲಿ ಲಾರಿ ಮತ್ತು ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೊಲೆರೋ ಜಖಂಗೊಂಡಿದ್ದು, ಲಾರಿ ರಸ್ತೆ ಪಕ್ಕಕ್ಕೆ ಇಳಿದಿದೆ. ದ್ವಿಚಕ್ರ ವಾಹನ ಸವಾರರು ಸಾಕಷ್ಟು ಬಾರಿ ಇಲ್ಲಿ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.</p>.<p>ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ದುರಸ್ತಿ ಕೆಲಸ ಸಮರ್ಪಕವಾಗಿ ನಡೆದೇ ಇಲ್ಲ. ಇಟ್ಟಿಗಿ ಬಳಿ ಇತ್ತೀಚಿಗೆ ಡಾಂಬರು ಹಾಕಲಾಗಿದ್ದು, ಸಮತಟ್ಟಾಗಿರದೇ ಉಬ್ಬು ತಗ್ಗು ಮಾಡಲಾಗಿದೆ. ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.</p>.<p>‘ರಾಜ್ಯ ಹೆದ್ದಾರಿ ರಿಪೇರಿ ಕೆಲಸ ಅಪೂರ್ಣಗೊಳಿಸಿದ್ದಾರೆ. ರಸ್ತೆಗೆ ಜಲ್ಲಿಕಲ್ಲು ಸುರಿದು ಹಾಗೇ ಬಿಟ್ಟಿರುವುದರಿಂದ ವೇಗದಲ್ಲಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿವೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಪ್ರಾಣಹಾನಿ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ರಿಪೇರಿ ಕೆಲಸ ಪೂರ್ಣಗೊಳಿಸಬೇಕು’ ಎಂದು ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-25-1101848524</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ತಾಲ್ಲೂಕಿನ ಉತ್ತಂಗಿ ಗ್ರಾಮದ ಹತ್ತಿರ ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ದುರಸ್ತಿ ಕಾಮಗಾರಿ ಅರಬರೆಯಾಗಿದ್ದು, ಇಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದರೂ ಯಾರೂ ಗಮನಹರಿಸುತ್ತಿಲ್ಲ ಎಂದು ಉತ್ತಂಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜ್ಯ ಹೆದ್ದಾರಿಯಲ್ಲಿ ಗುಂಡಿಬಿದ್ದು ಹಾಳಾಗಿರುವ ಆಯ್ದ ಭಾಗಗಳ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಉತ್ತಂಗಿಯ ತೀರ್ಥರಾಮೇಶ್ವರ ಪ್ಲಾಟ್ ಬಳಿ ಅರ್ಧ ಕಿ.ಮೀ. ಹಾಗೂ ಉತ್ತಂಗಿ ಕ್ರಾಸ್ ಬಳಿ 50 ಮೀಟರ್ನಷ್ಟು ರಸ್ತೆಯನ್ನು ಅಗೆಯಲಾಗಿದೆ. ಆರು ತಿಂಗಳ ರಸ್ತೆಗೆ ಜಲ್ಲಿಕಲ್ಲು ಸುರಿದು ಹಾಗೇ ಬಿಟ್ಟಿರುವುದರಿಂದ ಈ ಸ್ಥಳದಲ್ಲಿ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿವೆ.</p>.<p>ಏ. 9ರಂದು ತೀರ್ಥರಾಮೇಶ್ವರ ಪ್ಲಾಟ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರೊಂದು ರಸ್ತೆ ಬದಿಗೆ ಪಲ್ಟಿಯಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದರು.</p>.<p>ಈಚೆಗೆ ಅದೇ ಸ್ಥಳದಲ್ಲಿ ಲಾರಿ ಮತ್ತು ಬೊಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೊಲೆರೋ ಜಖಂಗೊಂಡಿದ್ದು, ಲಾರಿ ರಸ್ತೆ ಪಕ್ಕಕ್ಕೆ ಇಳಿದಿದೆ. ದ್ವಿಚಕ್ರ ವಾಹನ ಸವಾರರು ಸಾಕಷ್ಟು ಬಾರಿ ಇಲ್ಲಿ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.</p>.<p>ಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ದುರಸ್ತಿ ಕೆಲಸ ಸಮರ್ಪಕವಾಗಿ ನಡೆದೇ ಇಲ್ಲ. ಇಟ್ಟಿಗಿ ಬಳಿ ಇತ್ತೀಚಿಗೆ ಡಾಂಬರು ಹಾಕಲಾಗಿದ್ದು, ಸಮತಟ್ಟಾಗಿರದೇ ಉಬ್ಬು ತಗ್ಗು ಮಾಡಲಾಗಿದೆ. ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ.</p>.<p>‘ರಾಜ್ಯ ಹೆದ್ದಾರಿ ರಿಪೇರಿ ಕೆಲಸ ಅಪೂರ್ಣಗೊಳಿಸಿದ್ದಾರೆ. ರಸ್ತೆಗೆ ಜಲ್ಲಿಕಲ್ಲು ಸುರಿದು ಹಾಗೇ ಬಿಟ್ಟಿರುವುದರಿಂದ ವೇಗದಲ್ಲಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿವೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಪ್ರಾಣಹಾನಿ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ರಿಪೇರಿ ಕೆಲಸ ಪೂರ್ಣಗೊಳಿಸಬೇಕು’ ಎಂದು ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-25-1101848524</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>