ಈ ವೇಳೆ ಮಾತನಾಡಿದ ಆನಂದ್ ಸಿಂಗ್, ವಿಜಯನಗರ ಕ್ಷೇತ್ರಕ್ಕೆ ನಾನು ಶಾಸಕನೂ ಹೌದು, ರಾಜ್ಯಕ್ಕೆ ಮುಖ್ಯಮಂತ್ರಿಯೂ ಹೌದು. ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಬರುತ್ತಿದ್ದಾರೆ. ಧರಣಿ ನಡೆಸುವುದು ನಿಮ್ಮ ಹಕ್ಕು. ಆದರೆ, ಇಂತಹ ಸಂದರ್ಭದಲ್ಲಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಲಿ, ಅವರ ವಿರುದ್ಧ ಘೋಷಣೆ ಕೂಗುವುದಾಗಲಿ ಯಾರೂ ಮಾಡಬಾರದು. ಹೀಗೆ ಮಾಡಿದರೆ ವಿಜಯನಗರಕ್ಕೆ ಕೆಟ್ಟ ಹೆಸರು ಬರುತ್ತದೆ. ನೀವು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಮುಖ್ಯಮಂತ್ರಿ ಅವರನ್ನು ಕರೆತಂದು ಬೇಡಿಕೆ ಈಡೇರಿಸಲು ಶ್ರಮಿಸುತ್ತೇನೆ. ಎಲ್ಲರೂ ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.