ಶಾಸಕ ಕರುಣಾಕರ ರೆಡ್ಡಿ ಜನ್ಮದಿನದ ಪ್ರಯುಕ್ತ ಭಾನುವಾರ ಇಲ್ಲಿ ಆಯೋಜಿಸಿದ್ದ ಸೀತಾರಾಮ ಕಲ್ಯಾಣ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಶಾಸಕ, ಸಚಿವ, ಸಿಎಂ ಆಗಬೇಕೆಂಬ ಆಸೆ ಇಲ್ಲ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿ.ಎಂ. ಮಾಡಲು ಶ್ರಮಿಸಿದ್ದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ. ಖಂಡಿತವಾಗಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.