ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

150 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಿಸಲು ನಾನು ಕೂಡ ಕೆಲಸ ಮಾಡುವೆ: ಜನಾರ್ದನ ರೆಡ್ಡಿ

Last Updated 10 ಏಪ್ರಿಲ್ 2022, 9:29 IST
ಅಕ್ಷರ ಗಾತ್ರ

ಹರಪನಹಳ್ಳಿ (ವಿಜಯನಗರ): 'ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲು ನಾನು ಕೂಡ ನಿಮ್ಮೊಂದಿಗೆ ಕೆಲಸ‌ ಮಾಡಲು ಸಿದ್ಧ' ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಶಾಸಕ ಕರುಣಾಕರ ರೆಡ್ಡಿ ಜನ್ಮದಿನದ ಪ್ರಯುಕ್ತ ಭಾನುವಾರ ಇಲ್ಲಿ ಆಯೋಜಿಸಿದ್ದ ಸೀತಾರಾಮ ಕಲ್ಯಾಣ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ಶಾಸಕ, ಸಚಿವ, ಸಿಎಂ ಆಗಬೇಕೆಂಬ ಆಸೆ ಇಲ್ಲ‌. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿ.ಎಂ. ಮಾಡಲು ಶ್ರಮಿಸಿದ್ದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ. ಖಂಡಿತವಾಗಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.

ಮತ್ತೊಮ್ಮೆ ಬಿಜೆಪಿ ಸರ್ಕಾರ ಬರಲಿ. ಹಿರಿಯರು, ಬುದ್ಧಿವಂತ ಕರುಣಾಕರ ರೆಡ್ಡಿ ಅವರನ್ನು ಸಚಿವರಾಗಿ ಮಾಡಬೇಕು. ಹರಪನಹಳ್ಳಿಯಲ್ಲಿ ಅವರೊಂದಿಗೆ ಹೆಜ್ಜೆ ಹಾಕಿ ಕೆಲಸ ಮಾಡುತ್ತೇನೆ‌. ಪ್ರತಿಯೊಂದು ಹಳ್ಳಿಗೆ ಭೇಟಿ ಕೊಡುತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT