ಹೊಸಪೇಟೆ (ವಿಜಯನಗರ): ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂರು ಎತ್ತು, ಎರಡು ಗೂಳಿ ಹಾಗೂ ಅವುಗಳನ್ನು ಸಾಗಾಟ ಮಾಡುತ್ತಿದ್ದ ಮಿನಿ ಅಶೋಕ್ ಲೇಲ್ಯಾಂಡ್ ವಾಹನ ವಶಪಡಿಸಿಕೊಂಡಿರುವ ಪೊಲೀಸರು, ಬೆಂಗಳೂರಿನ ವಾಸಿಂ (34), ದಾವೂದ್ (21) ಎಂಬುವರನ್ನು ವಶಕ್ಕೆ ಪಡೆದು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
‘ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ ಬಳ್ಳಾರಿಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಬುಧವಾರ ಸಂಜೆ ನಗರ ಹೊರವಲಯದ ಕಾರಿಗನೂರು ಬಳಿ ಕಾರ್ಯಾಚರಣೆ ನಡೆಸಿ, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.