ಜಲಾನಯನ ಪ್ರದೇಶ ಹಾಗೂ ಮಲೆನಾಡಿನಲ್ಲಿ ಮಳೆ ತಗ್ಗಿರುವುದರಿಂದ ಜಲಾಶಯದ ಮೇಲ್ಭಾಗ ಹಾಗೂ ಅಣೆಕಟ್ಟೆ ಎದುರು ನದಿಯಲ್ಲಿ ನೀರಿನ ಹರಿವು ತಗ್ಗಿದೆ. ನದಿಯಲ್ಲಿ ತಲೆದೋರಿದ್ದ ಪ್ರವಾಹ ಪರಿಸ್ಥಿತಿ ದೂರವಾಗಿರುವುದರಿಂದ ಜಿಲ್ಲೆಯ ಹೂವಿನಹಡಗಲಿ, ಹರಪನಹಳ್ಳಿಯಲ್ಲಿ ಮೆಕ್ಕೆಜೋಳ, ಭತ್ತದ ಗದ್ದೆಗಳಿಗೆ ನುಗ್ಗಿದ ನೀರು ಹೊರಹೋಗಿದೆ. ಹಂಪಿ ಬಾಳೆಗದ್ದೆಗಳಿಂದಲೂ ನೀರು ದೂರ ಸರಿದಿದೆ.