ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ಅಂತರ್ಜಾತಿ ಮದುವೆ; ರಕ್ಷಣೆ ಕೋರಿದ ದಂಪತಿ

Last Updated 23 ಡಿಸೆಂಬರ್ 2021, 16:22 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ಅಂತರ್ಜಾತಿ ವಿವಾಹವಾಗಿರುವ ದಂಪತಿ ಮನೆಯವರಿಂದ ರಕ್ಷಣೆ ಕೊಡಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಪಿ.ಎನ್.ಸೌಮ್ಯ ಹಾಗೂ ಕಿರಣ್ ಅವರು ಗುರುವಾರ ಖುದ್ದು ಎಸ್ಪಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

‘ಪರಸ್ಪರ ಪ್ರೀತಿಸಿ ನ. 30ರಂದು ಸ್ವಇಚ್ಛೆಯಿಂದ ಹರಪನಹಳ್ಳಿ ಉಪನೋಂದಣಾಧಿಕಾರಿ ಕಚೇರಿಯಲ್ಲಿ ರಿಜಿಸ್ಟರ್ ಮದುವೆಯಾಗಿದ್ದೇವೆ. ಅಂತರ್ಜಾತಿ ವಿವಾಹವಾದ ಕಾರಣ ಮನೆಯವರು ಒಪ್ಪುತ್ತಿಲ್ಲ. ಜೀವ ಬೆದರಿಕೆ ಹಾಕುತ್ತಿದ್ದಾರೆ. ರಕ್ಷಣೆ ಒದಗಿಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ. ಕಿರಣ ಕೊರಚ ಜಾತಿಗೆ ಸೇರಿದರೆ, ಸೌಮ್ಯ, ಲಿಂಗಾಯತ ಸಮುದಾಯದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT