<p><strong>ಹೊಸಪೇಟೆ (ವಿಜಯನಗರ):</strong> ಒಳಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಇಲ್ಲಿ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.</p>.<p>ಒಳಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ನಗರದ ಸಾಯಿಬಾಬಾ ವೃತ್ತದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಕೆಲವರು ಶರ್ಟ್, ಇನ್ನೂ ಕೆಲವರು ಬರಿಮೈಯಲ್ಲೇ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಪ್ರತಿಭಟನೆ ನಡೆಸಿದರು. </p>.<p>ಮುಖಂಡರಾದ ಬಲ್ಲಾಹುಣ್ಸಿ ರಾಮಣ್ಣ, ಎಂ.ಸಿ.ವೀರಸ್ವಾಮಿ ಹಾಗೂ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಮುಖಂಡರ ನೇತೃತ್ವದಲ್ಲಿ ನಡೆದ ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು. ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಲ್ಲಾಹುಣ್ಸಿ ರಾಮಣ್ಣ, ಹೋರಾಟ ತೀವ್ರಗೊಳಿಸಿದ್ದರ ಹಿನ್ನೆಲೆ ತಿಳಿಸಿ, ಸರ್ಕಾರದ ವಿಳಂಬ ನೀತಿಯನ್ನು ಇನ್ನಷ್ಟು ಸಹಿಸಲು ಸಾಧ್ಯವಿಲ್ಲ ಎಂದರು. ತಕ್ಷಣ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಕೆ.ಪಿ.ಉಮಾಪತಿ, ತಗ್ಗಿನಕೇರಿ ಕೊಟ್ರೇಶ್, ಮಲ್ಲಿಕಾರ್ಜುನ ಕೊಟಗಿನಾಳ, ಪೂಜಪ್ಪ, ಕೊಟ್ಟೂರು ಮರಿಸ್ವಾಮಿ, ಕಣಿವೆಹಳ್ಳಿ ಮಂಜುನಾಥ, ಎಸ್.ದುರ್ಗೇಶ್, ವಿಶಾಲಾಕ್ಷಿ ಇತರರು ಮಾತನಾಡಿದರು. ಸಿ.ಆರ್.ಭರತ್ಕುಮಾರ್, ಶೇಷು, ಸಣ್ಣ ಮಾರೆಪ್ಪ, ಬಸವರಾಜ್, ಲಕ್ಷ್ಮಣ ಕಾರಿಗನೂರು ಇತರರು ಇದ್ದರು.</p>.<p>ಕೊನೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಕಳುಹಿಸಿಕೊಡಲಾಯಿತು.</p>.ಒಳಮೀಸಲಾತಿ ಜಾರಿ ವಿಳಂಬ: ಚಿತ್ರದುರ್ಗದಲ್ಲಿ ಮಾದಿಗ ಸಂಘಟನೆಗಳ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಒಳಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಇಲ್ಲಿ ಅರೆಬೆತ್ತಲೆ ಮೆರವಣಿಗೆ, ಪ್ರತಿಭಟನೆ ನಡೆಯಿತು.</p>.<p>ಒಳಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ನಗರದ ಸಾಯಿಬಾಬಾ ವೃತ್ತದಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಕೆಲವರು ಶರ್ಟ್, ಇನ್ನೂ ಕೆಲವರು ಬರಿಮೈಯಲ್ಲೇ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಪ್ರತಿಭಟನೆ ನಡೆಸಿದರು. </p>.<p>ಮುಖಂಡರಾದ ಬಲ್ಲಾಹುಣ್ಸಿ ರಾಮಣ್ಣ, ಎಂ.ಸಿ.ವೀರಸ್ವಾಮಿ ಹಾಗೂ ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಮುಖಂಡರ ನೇತೃತ್ವದಲ್ಲಿ ನಡೆದ ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು. ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಲ್ಲಾಹುಣ್ಸಿ ರಾಮಣ್ಣ, ಹೋರಾಟ ತೀವ್ರಗೊಳಿಸಿದ್ದರ ಹಿನ್ನೆಲೆ ತಿಳಿಸಿ, ಸರ್ಕಾರದ ವಿಳಂಬ ನೀತಿಯನ್ನು ಇನ್ನಷ್ಟು ಸಹಿಸಲು ಸಾಧ್ಯವಿಲ್ಲ ಎಂದರು. ತಕ್ಷಣ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಕೆ.ಪಿ.ಉಮಾಪತಿ, ತಗ್ಗಿನಕೇರಿ ಕೊಟ್ರೇಶ್, ಮಲ್ಲಿಕಾರ್ಜುನ ಕೊಟಗಿನಾಳ, ಪೂಜಪ್ಪ, ಕೊಟ್ಟೂರು ಮರಿಸ್ವಾಮಿ, ಕಣಿವೆಹಳ್ಳಿ ಮಂಜುನಾಥ, ಎಸ್.ದುರ್ಗೇಶ್, ವಿಶಾಲಾಕ್ಷಿ ಇತರರು ಮಾತನಾಡಿದರು. ಸಿ.ಆರ್.ಭರತ್ಕುಮಾರ್, ಶೇಷು, ಸಣ್ಣ ಮಾರೆಪ್ಪ, ಬಸವರಾಜ್, ಲಕ್ಷ್ಮಣ ಕಾರಿಗನೂರು ಇತರರು ಇದ್ದರು.</p>.<p>ಕೊನೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಕಳುಹಿಸಿಕೊಡಲಾಯಿತು.</p>.ಒಳಮೀಸಲಾತಿ ಜಾರಿ ವಿಳಂಬ: ಚಿತ್ರದುರ್ಗದಲ್ಲಿ ಮಾದಿಗ ಸಂಘಟನೆಗಳ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>