ಅಕಾಡೆಮಿಯ ಅಧ್ಯಕ್ಷೆ ಮಾತಾ ಬಿ. ಮಂಜಮ್ಮ ಜೋಗತಿ, ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ, ಅಕಾಡೆಮಿ ಸದಸ್ಯ ಚಂದ್ರಶೇಖರ್ ಅವರು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಗಾಯಕರಾದ ಮಾರುತಿ, ಅನುರಾಧಾ ಅವರು, ಕಲಾವಿದರ ನಡುವೆ ತಾರತಮ್ಯ ಮಾಡಲಾಗಿದೆ. ನಿಮಗೆ ಬೇಕಾದವರಿಗೆ ಮಣೆ ಹಾಕಿದ್ದೀರಿ. ಕನ್ನಡ ಸಂಸ್ಕೃತಿ ಇಲಾಖೆಯವರು ಮೊದಲಿನಿಂದಲೂ ಕೆಲ ಕಲಾವಿದರಿಗೆ ಅವಕಾಶ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.