ನಂತರ ಮುಖ್ಯಮಂತ್ರಿಯವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಕೇಂದ್ರ ಸರ್ಕಾರ ‘ಹಿಂದಿ ದಿವಸ್’ ಆಚರಣೆಯ ಹೆಸರಿನಲ್ಲಿ ಹಿಂದಿಗೆ ಆದ್ಯತೆ ಕೊಟ್ಟು ಇತರೆ ಭಾಷೆಗಳನ್ನು ಕಡೆಗಣಿಸುತ್ತಿದೆ. ಸಂವಿಧಾನದಲ್ಲಿ ಸ್ಪಷ್ಟ ಭಾಷಾ ನೀತಿಯ ಉಲ್ಲೇಖವಿದೆ. ಹಿಂದಿ, ಇಂಗ್ಲಿಷ್ಗೆ ಹೆಚ್ಚಿನ ಆದ್ಯತೆ ಕೊಡುವುದರ ಮೂಲಕ ಇತರೆ ಭಾಷಿಕರಿಗೆ ಕಲಿಕೆ, ಪ್ರವೇಶ ಪರೀಕ್ಷೆ, ಉದ್ಯೋಗ ನೇಮಕಾತಿ, ಸಾರ್ವಜನಿಕ ಸೇವೆಗಳು ಕೊಡುವಾಗ ತೊಂದರೆ ಅನುಭವಿಸುತ್ತಿದ್ದಾರೆ. ಹಿಂದಿಯೇತರರ ಮೇಲೆ ಹಿಂದಿ ಹೇರಿಕೆ ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ.