<p><strong>ಹೊಸಪೇಟೆ (ವಿಜಯನಗರ):</strong> ನರೇಗಾದಲ್ಲಿ ಭಾರಿ ಅವ್ಯವಹಾರ ನಡೆದಿತ್ತು, ಕೂಲಿ ಕೆಲಸ ಮಾಡಿದವರಿಗೆ ಕೂಲಿ ವಂಚಿಸಲಾಗುತ್ತಿತ್ತು. ಇದನ್ನು ತಿಳಿದುಕೊಂಡೇ ಮಹಾತ್ಮ ಗಾಂಧೀಜಿ ಅವರ ರಾಮರಾಜ್ಯದ ಕನಸಿನ ಪ್ರೇರಣೆಯೊಂದಿಗೆ ಜಿ ರಾಮ್ ಜಿ ಯೋಜನೆ ಜಾರಿಗೆ ತರಲಾಗಿದೆ, ಈ ವಿಚಾರದಲ್ಲಿ ಮಾಡಲಾಗುತ್ತಿರುವ ಅಪಪ್ರಚಾರಕ್ಕೆ ಜನ ಕಿವಿಗೊಡಬಾರದು ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮನವಿ ಮಾಡಿದರು.</p>.<p>ಇಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಅವರು, ನರೇಗಾದಲ್ಲಿ ಮಧ್ಯವರ್ತಿಗಳ ಹಾವಳಿ ವಿಪರೀತವಾಗಿತ್ತು. 4.39 ಲಕ್ಷ ನಕಲಿ ಜಾಬ್ಕಾರ್ಡ್ ಮಾಡಿಸಿ ₹74 ಸಾವಿರ ಕೋಟಿ ಅವ್ಯವಹಾರ ನಡೆಸಲಾಗಿತ್ತು. ಇದೆಲ್ಲವನ್ನು ತಿಳಿದುಕೊಂಡ ಬಳಿಕವಷ್ಟೇ ಕೇಂದ್ರ ಹೊಸ ರೂಪದಲ್ಲಿ ಯೋಜನೆ ಜಾರಿಗೆ ತಂದಿದೆ, ಮಹಾತ್ಮ ಗಾಂಧಿ ಅವರ ಬಗ್ಗೆ ಪಕ್ಷಕ್ಕೆ ಅಪಾರ ಗೌರವ ಇದೆ, ಅವರ ರಾಮರಾಜ್ಯದ ಕನಸನ್ನು ನನಸು ಮಾಡುವುದೇ ಹೊಸ ಯೋಜನೆಯ ಉದ್ದೇಶ ಎಂದರು.</p>.<p>ಉದ್ಯೋಗದ ದಿನ 100ರಿಂದ 125ಕ್ಕೆ ಹೆಚ್ಚಳವಾಗಿದೆ, ಕೂಲಿ ಹಣವನ್ನು ₹350ರಿಂದ ₹380ಕ್ಕೆ ಏರಿಕೆ ಮಾಡಲಾಗಿದೆ. ಎರಡು ವಾರದೊಳಗೆ ನೇರವಾಗಿ ಖಾತೆಗೆ ಹಣ ಸಂದಾಯವಾಗುವ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಕೂಲಿಕಾರರ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೂ ಹೊಣೆಗಾರಿಕೆ ಇರಲಿ ಎಂಬ ಕಾರಣಕ್ಕೆ ಶೇ60:40 ಅನುದಾನ ಹಂಚಿಕೆಯ ಸೂತ್ರ ಸಿದ್ಧಪಡಿಸಲಾಗಿದೆ, ಇದಾಗಿಯೂ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ₹36 ಸಾವಿರ ಕೋಟಿಯಿಂದ ₹2.86 ಲಕ್ಷ ಕೋಟಿಗೆ ಹೆಚ್ಚಿಸಿದ್ದನ್ನು ಮರೆಯಲಾಗದು ಎಂದರು.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಂಜೀವ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಎಸ್. ರಾಘವೇಂದ್ರ, ಜಿಲ್ಲಾ ವಕ್ತಾರ ಅಶೋಕ್ ಜಿರೆ, ಸಹ ವಕ್ತಾರ ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನರೇಗಾದಲ್ಲಿ ಭಾರಿ ಅವ್ಯವಹಾರ ನಡೆದಿತ್ತು, ಕೂಲಿ ಕೆಲಸ ಮಾಡಿದವರಿಗೆ ಕೂಲಿ ವಂಚಿಸಲಾಗುತ್ತಿತ್ತು. ಇದನ್ನು ತಿಳಿದುಕೊಂಡೇ ಮಹಾತ್ಮ ಗಾಂಧೀಜಿ ಅವರ ರಾಮರಾಜ್ಯದ ಕನಸಿನ ಪ್ರೇರಣೆಯೊಂದಿಗೆ ಜಿ ರಾಮ್ ಜಿ ಯೋಜನೆ ಜಾರಿಗೆ ತರಲಾಗಿದೆ, ಈ ವಿಚಾರದಲ್ಲಿ ಮಾಡಲಾಗುತ್ತಿರುವ ಅಪಪ್ರಚಾರಕ್ಕೆ ಜನ ಕಿವಿಗೊಡಬಾರದು ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮನವಿ ಮಾಡಿದರು.</p>.<p>ಇಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಅವರು, ನರೇಗಾದಲ್ಲಿ ಮಧ್ಯವರ್ತಿಗಳ ಹಾವಳಿ ವಿಪರೀತವಾಗಿತ್ತು. 4.39 ಲಕ್ಷ ನಕಲಿ ಜಾಬ್ಕಾರ್ಡ್ ಮಾಡಿಸಿ ₹74 ಸಾವಿರ ಕೋಟಿ ಅವ್ಯವಹಾರ ನಡೆಸಲಾಗಿತ್ತು. ಇದೆಲ್ಲವನ್ನು ತಿಳಿದುಕೊಂಡ ಬಳಿಕವಷ್ಟೇ ಕೇಂದ್ರ ಹೊಸ ರೂಪದಲ್ಲಿ ಯೋಜನೆ ಜಾರಿಗೆ ತಂದಿದೆ, ಮಹಾತ್ಮ ಗಾಂಧಿ ಅವರ ಬಗ್ಗೆ ಪಕ್ಷಕ್ಕೆ ಅಪಾರ ಗೌರವ ಇದೆ, ಅವರ ರಾಮರಾಜ್ಯದ ಕನಸನ್ನು ನನಸು ಮಾಡುವುದೇ ಹೊಸ ಯೋಜನೆಯ ಉದ್ದೇಶ ಎಂದರು.</p>.<p>ಉದ್ಯೋಗದ ದಿನ 100ರಿಂದ 125ಕ್ಕೆ ಹೆಚ್ಚಳವಾಗಿದೆ, ಕೂಲಿ ಹಣವನ್ನು ₹350ರಿಂದ ₹380ಕ್ಕೆ ಏರಿಕೆ ಮಾಡಲಾಗಿದೆ. ಎರಡು ವಾರದೊಳಗೆ ನೇರವಾಗಿ ಖಾತೆಗೆ ಹಣ ಸಂದಾಯವಾಗುವ ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಕೂಲಿಕಾರರ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೂ ಹೊಣೆಗಾರಿಕೆ ಇರಲಿ ಎಂಬ ಕಾರಣಕ್ಕೆ ಶೇ60:40 ಅನುದಾನ ಹಂಚಿಕೆಯ ಸೂತ್ರ ಸಿದ್ಧಪಡಿಸಲಾಗಿದೆ, ಇದಾಗಿಯೂ ಕೇಂದ್ರ ಸರ್ಕಾರ ನೀಡುವ ಅನುದಾನವನ್ನು ₹36 ಸಾವಿರ ಕೋಟಿಯಿಂದ ₹2.86 ಲಕ್ಷ ಕೋಟಿಗೆ ಹೆಚ್ಚಿಸಿದ್ದನ್ನು ಮರೆಯಲಾಗದು ಎಂದರು.</p>.<p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಂಜೀವ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಕೆ.ಎಸ್. ರಾಘವೇಂದ್ರ, ಜಿಲ್ಲಾ ವಕ್ತಾರ ಅಶೋಕ್ ಜಿರೆ, ಸಹ ವಕ್ತಾರ ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>