ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ನ್ಯಾಯಾಧೀಶರ ಸೂಚನೆ

Last Updated 18 ನವೆಂಬರ್ 2022, 12:27 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹಿಮಾನ್ ಎ.ನಂದಗಡಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ನಿತ್ಯವೂ ಸ್ವಚ್ಛತೆ ಕಾಪಾಡಿಕೊಂಡು ಹೋಗಬೇಕು. ಒಂದು ವಾರದೊಳಗೆ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸದಿದ್ದಲ್ಲಿ ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಆಸ್ಪತ್ರೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಹರಿಪ್ರಸಾದ್‌, ತಾಲ್ಲೂಕು ಕಾನೂನು ಸೇವಾ ಸಮಿತಿಯ ಆಡಳಿತಾಧಿಕಾರಿ ಎಸ್.ಬಿ.ಕಮತಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT