ತಾಲ್ಲೂಕಿನ ಹ್ಯಾರಡ ಗ್ರಾಮದಲ್ಲಿ ಭಾನುವಾರ ಬೀರಲಿಂಗೇಶ್ವರ ದೇವಸ್ಥಾನ ನಿರ್ಮಾಣ ಭೂಮಿಪೂಜೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ದೈವದ ನಂಬಿಕೆಯಿಂದ ಭಕ್ತರು ಮೂರೂ ಬೀರಲಿಂಗೇಶ್ವರ ದೇವಸ್ಥಾನಗಳಿಗೆ ಕಾಣಿಕೆ ರೂಪದಲ್ಲಿ ಕೋಟ್ಯಂತರ ರೂಪಾಯಿ ಅರ್ಪಿಸುತ್ತಾರೆ. ಆದರೆ, ಕೆಲವರ ಸ್ವಾರ್ಥದಿಂದ ಹಣ ದುರುಪಯೋಗವಾಗುತ್ತಿದೆ. ಮೂರು ದೇವಸ್ಥಾನಗಳನ್ನು ಕಾಗಿನೆಲೆ ಪೀಠಕ್ಕೆ ಬಿಟ್ಟುಕೊಟ್ಟಲ್ಲಿ ಮೆಡಿಕಲ್ ಕಾಲೇಜು ತೆಗೆಯುತ್ತೇವೆ. ಎಲ್ಲರಿಗೂ ಪ್ರಯೋಜನವಾಗುತ್ತದೆ’ ಎಂದು ತಿಳಿಸಿದರು.