<p><strong>ಕೊಟ್ಟೂರು:</strong> ಕೀರ್ತನೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಶ್ರಮಿಸಿದವರು ಕೈವಾರ ತಾತಯ್ಯ. ಅವರ ತತ್ವ ಆದರ್ಶದ ಬದುಕನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಜಿ.ಕೆ.ಅಮರೀಶ್ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಯೋಗಿ ನಾರಾಯಣ ಯತೀಂದ್ರ ಜಯಂತಿ ಸಮಾರಂಭದಲ್ಲಿ ಮಾತನಾಡಿ, ಶರಣ, ದಾಸ ಪರಂಪರೆಗಳಿಗೆ ಕೊಂಡಿಯಾಗಿ ಕೆಲಸ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.</p>.<p>ಬಲಿಜ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಹರೀಶ್ ಮಾತನಾಡಿ, ಕೈವಾರ ತಾತಯ್ಯ ಸಮಾಜ ಸುಧಾರಕರಾಗಿದ್ದು, ಅವರು ತೋರಿದ ಮಾರ್ಗದಲ್ಲಿ ಮುನ್ನಡೆಯೋಣ ಎಂದರು.</p>.<p>ಮುಖಂಡರಾದ ಪಿ.ಬಾಬಯ್ಯ, ನಾರಾಯಣಪ್ಪ, ಪಿ.ಕೊಟ್ರೇಶ್, ಗೋಪಾಲ, ಮುರಳಿ, ಪ್ರಶಾಂತ, ಪ್ರವೀಣ ಕುಮಾರ್, ಕಿರಣಕುಮಾರ್, ಶಿರಸ್ತೇದಾರರಾದ ಅನ್ನದಾನೇಶ್ ಬಿ.ಪತ್ತಾರ್, ಎಚ್.ಎಂ.ಕೊಟ್ರಮ್ಮ, ಚಂದ್ರನಾಯ್ಕ, ಕಂದಾಯ ನಿರೀಕ್ಷಕ ಡಿ.ಶಿವಕುಮಾರ್, ಸಿ.ಮ.ಗುರುಬಸವರಾಜ್, ಮಂಜಮ್ಮ, ಗೌರಮ್ಮ, ಜ್ಯೋತಿಬಾಯಿ, ರಮೇಶ್ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು:</strong> ಕೀರ್ತನೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಶ್ರಮಿಸಿದವರು ಕೈವಾರ ತಾತಯ್ಯ. ಅವರ ತತ್ವ ಆದರ್ಶದ ಬದುಕನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಜಿ.ಕೆ.ಅಮರೀಶ್ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಯೋಗಿ ನಾರಾಯಣ ಯತೀಂದ್ರ ಜಯಂತಿ ಸಮಾರಂಭದಲ್ಲಿ ಮಾತನಾಡಿ, ಶರಣ, ದಾಸ ಪರಂಪರೆಗಳಿಗೆ ಕೊಂಡಿಯಾಗಿ ಕೆಲಸ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.</p>.<p>ಬಲಿಜ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಹರೀಶ್ ಮಾತನಾಡಿ, ಕೈವಾರ ತಾತಯ್ಯ ಸಮಾಜ ಸುಧಾರಕರಾಗಿದ್ದು, ಅವರು ತೋರಿದ ಮಾರ್ಗದಲ್ಲಿ ಮುನ್ನಡೆಯೋಣ ಎಂದರು.</p>.<p>ಮುಖಂಡರಾದ ಪಿ.ಬಾಬಯ್ಯ, ನಾರಾಯಣಪ್ಪ, ಪಿ.ಕೊಟ್ರೇಶ್, ಗೋಪಾಲ, ಮುರಳಿ, ಪ್ರಶಾಂತ, ಪ್ರವೀಣ ಕುಮಾರ್, ಕಿರಣಕುಮಾರ್, ಶಿರಸ್ತೇದಾರರಾದ ಅನ್ನದಾನೇಶ್ ಬಿ.ಪತ್ತಾರ್, ಎಚ್.ಎಂ.ಕೊಟ್ರಮ್ಮ, ಚಂದ್ರನಾಯ್ಕ, ಕಂದಾಯ ನಿರೀಕ್ಷಕ ಡಿ.ಶಿವಕುಮಾರ್, ಸಿ.ಮ.ಗುರುಬಸವರಾಜ್, ಮಂಜಮ್ಮ, ಗೌರಮ್ಮ, ಜ್ಯೋತಿಬಾಯಿ, ರಮೇಶ್ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>