<p><strong>ವಿಜಯನಗರ (ಹೊಸಪೇಟೆ):</strong> ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆಯ ನಂತರ ನೂತನ ವಿಜಯನಗರ ಜಿಲ್ಲೆಗೆ ಕಲ್ಯಾಣ ಕರ್ನಾಟಕದ ಎಲ್ಲ ಸವಲತ್ತುಗಳು ಕೈತಪ್ಪಿ ಹೋಗಲಿವೆ ಎಂಬ ಆತಂಕ ಇದೀಗ ದೂರವಾಗಿದೆ.</p>.<p>ರಾಜ್ಯ ಸರ್ಕಾರವು ಗುರುವಾರ (ಫೆ.25) ಈ ಸಂಬಂಧ ಅಧಿಕೃತ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯಿಂದ ವಿಭಜನೆಗೊಂಡು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಈ ಹಿಂದಿನಂತೆ ಸಂವಿಧಾನದ 371 (ಜೆ) ಸೌಲಭ್ಯ ಅನ್ವಯಿಸಲಿದೆ. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ದೊರಕಲಿದೆ.</p>.<p>ಇಷ್ಟೇ ಅಲ್ಲ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಎಲ್ಲ ಸವಲತ್ತುಗಳು ಹೊಸ ಜಿಲ್ಲೆಗೆ ಅನ್ವಯಿಸಲಿವೆ. ಶಿಕ್ಷಣ ಸಂಸ್ಥೆಗಳಿಗೂ ಈ ಹಿಂದಿನಂತೆಯೇ ಕಲ್ಯಾಣ ಕರ್ನಾಟಕದ ಸೌಲಭ್ಯಗಳು ದಕ್ಕಲಿವೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.</p>.<p>‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 371(ಜೆ) ಸೌಲಭ್ಯ ಹೊಸ ಜಿಲ್ಲೆಗೆ ಅನ್ವಯಿಸಿ ಸರ್ಕಾರ ಆದೇಶ ಹೊರಡಿಸಿರುವುದು ಅಭಿನಂದನಾರ್ಹ. ಈ ವಿಶೇಷ ಸೌಲಭ್ಯದಿಂದ ಈ ಭಾಗದ ಯುವಕ/ಯುವತಿಯರಿಗೆ ಸಾಕಷ್ಟು ಪ್ರಯೋಜನವಾಗಲಿದೆ’ ಎಂದು ಸಂಶೋಧನಾ ವಿದ್ಯಾರ್ಥಿ ರಮೇಶ ಹೇಳಿದರು.</p>.<p><strong>ಏಕೆ ಮೂಡಿತು ಗೊಂದಲ?</strong></p>.<p>ವಿಶಾಲ ಬಳ್ಳಾರಿ ಜಿಲ್ಲೆ ವಿಭಜನೆಯ ಸಂದರ್ಭದಲ್ಲಿ ಈ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಂದುವೇಳೆ ಹೊಸದಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದರೆ ಅದಕ್ಕೆ ಕಲ್ಯಾಣ ಕರ್ನಾಟಕದ ಎಲ್ಲ ಸೌಲಭ್ಯಗಳು ಕೈತಪ್ಪಿ ಹೋಗಲಿವೆ ಎನ್ನುವ ವಿಷಯ ಹರದಾಡಿತ್ತು. ಇದು ವಿಜಯನಗರ ಜಿಲ್ಲಾ ವ್ಯಾಪ್ತಿ ತಾಲ್ಲೂಕುಗಳ ಜನರ ಆತಂಕಕ್ಕೆ ಕಾರಣವಾಗಿತ್ತು.</p>.<p>ಈ ವಿಷಯವಾಗಿ ಖುದ್ದು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಹಲವು ಸಲ ಹೇಳಿಕೆ ನೀಡಿದ್ದರು. ‘ಹೊಸ ಜಿಲ್ಲೆ ರಚನೆಯಿಂದ ಈ ಹಿಂದಿನ ಯಾವ ಸೌಲಭ್ಯಗಳು ಹೋಗುವುದಿಲ್ಲ. ಕಲಬುರ್ಗಿ ಜಿಲ್ಲೆಯಿಂದ ಯಾದಗಿರಿ ವಿಭಜನೆಗೊಂಡರೂ ಅದಕ್ಕೆ ಈ ಹಿಂದಿನಂತೆಯೇ ಎಲ್ಲ ಸವಲತ್ತುಗಳು ಸಿಗುತ್ತಿವೆ. ಅದರಂತೆಯೇ ವಿಜಯನಗರಕ್ಕೂ ಸಿಗಲಿವೆ’ ಎಂದಿದ್ದರು. ಈಗ ಅವರ ಮಾತು ನಿಜವಾಗಿದೆ.</p>.<p><strong>ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳು</strong></p>.<p>ಬೀದರ್</p>.<p>ಕಲಬುರ್ಗಿ</p>.<p>ಯಾದಗಿರಿ</p>.<p>ರಾಯಚೂರು</p>.<p>ಕೊಪ್ಪಳ</p>.<p>ಬಳ್ಳಾರಿ</p>.<p>ವಿಜಯನಗರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯನಗರ (ಹೊಸಪೇಟೆ):</strong> ಅಖಂಡ ಬಳ್ಳಾರಿ ಜಿಲ್ಲೆಯ ವಿಭಜನೆಯ ನಂತರ ನೂತನ ವಿಜಯನಗರ ಜಿಲ್ಲೆಗೆ ಕಲ್ಯಾಣ ಕರ್ನಾಟಕದ ಎಲ್ಲ ಸವಲತ್ತುಗಳು ಕೈತಪ್ಪಿ ಹೋಗಲಿವೆ ಎಂಬ ಆತಂಕ ಇದೀಗ ದೂರವಾಗಿದೆ.</p>.<p>ರಾಜ್ಯ ಸರ್ಕಾರವು ಗುರುವಾರ (ಫೆ.25) ಈ ಸಂಬಂಧ ಅಧಿಕೃತ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯಿಂದ ವಿಭಜನೆಗೊಂಡು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಈ ಹಿಂದಿನಂತೆ ಸಂವಿಧಾನದ 371 (ಜೆ) ಸೌಲಭ್ಯ ಅನ್ವಯಿಸಲಿದೆ. ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ದೊರಕಲಿದೆ.</p>.<p>ಇಷ್ಟೇ ಅಲ್ಲ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಎಲ್ಲ ಸವಲತ್ತುಗಳು ಹೊಸ ಜಿಲ್ಲೆಗೆ ಅನ್ವಯಿಸಲಿವೆ. ಶಿಕ್ಷಣ ಸಂಸ್ಥೆಗಳಿಗೂ ಈ ಹಿಂದಿನಂತೆಯೇ ಕಲ್ಯಾಣ ಕರ್ನಾಟಕದ ಸೌಲಭ್ಯಗಳು ದಕ್ಕಲಿವೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.</p>.<p>‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 371(ಜೆ) ಸೌಲಭ್ಯ ಹೊಸ ಜಿಲ್ಲೆಗೆ ಅನ್ವಯಿಸಿ ಸರ್ಕಾರ ಆದೇಶ ಹೊರಡಿಸಿರುವುದು ಅಭಿನಂದನಾರ್ಹ. ಈ ವಿಶೇಷ ಸೌಲಭ್ಯದಿಂದ ಈ ಭಾಗದ ಯುವಕ/ಯುವತಿಯರಿಗೆ ಸಾಕಷ್ಟು ಪ್ರಯೋಜನವಾಗಲಿದೆ’ ಎಂದು ಸಂಶೋಧನಾ ವಿದ್ಯಾರ್ಥಿ ರಮೇಶ ಹೇಳಿದರು.</p>.<p><strong>ಏಕೆ ಮೂಡಿತು ಗೊಂದಲ?</strong></p>.<p>ವಿಶಾಲ ಬಳ್ಳಾರಿ ಜಿಲ್ಲೆ ವಿಭಜನೆಯ ಸಂದರ್ಭದಲ್ಲಿ ಈ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಒಂದುವೇಳೆ ಹೊಸದಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದರೆ ಅದಕ್ಕೆ ಕಲ್ಯಾಣ ಕರ್ನಾಟಕದ ಎಲ್ಲ ಸೌಲಭ್ಯಗಳು ಕೈತಪ್ಪಿ ಹೋಗಲಿವೆ ಎನ್ನುವ ವಿಷಯ ಹರದಾಡಿತ್ತು. ಇದು ವಿಜಯನಗರ ಜಿಲ್ಲಾ ವ್ಯಾಪ್ತಿ ತಾಲ್ಲೂಕುಗಳ ಜನರ ಆತಂಕಕ್ಕೆ ಕಾರಣವಾಗಿತ್ತು.</p>.<p>ಈ ವಿಷಯವಾಗಿ ಖುದ್ದು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಹಲವು ಸಲ ಹೇಳಿಕೆ ನೀಡಿದ್ದರು. ‘ಹೊಸ ಜಿಲ್ಲೆ ರಚನೆಯಿಂದ ಈ ಹಿಂದಿನ ಯಾವ ಸೌಲಭ್ಯಗಳು ಹೋಗುವುದಿಲ್ಲ. ಕಲಬುರ್ಗಿ ಜಿಲ್ಲೆಯಿಂದ ಯಾದಗಿರಿ ವಿಭಜನೆಗೊಂಡರೂ ಅದಕ್ಕೆ ಈ ಹಿಂದಿನಂತೆಯೇ ಎಲ್ಲ ಸವಲತ್ತುಗಳು ಸಿಗುತ್ತಿವೆ. ಅದರಂತೆಯೇ ವಿಜಯನಗರಕ್ಕೂ ಸಿಗಲಿವೆ’ ಎಂದಿದ್ದರು. ಈಗ ಅವರ ಮಾತು ನಿಜವಾಗಿದೆ.</p>.<p><strong>ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳು</strong></p>.<p>ಬೀದರ್</p>.<p>ಕಲಬುರ್ಗಿ</p>.<p>ಯಾದಗಿರಿ</p>.<p>ರಾಯಚೂರು</p>.<p>ಕೊಪ್ಪಳ</p>.<p>ಬಳ್ಳಾರಿ</p>.<p>ವಿಜಯನಗರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>