<p><strong>ಹೊಸಪೇಟೆ (ವಿಜಯನಗರ): </strong>ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಕಾಟಾಚಾರಕ್ಕೆ ಶುಕ್ರವಾರ ಇಲ್ಲಿ ಆಚರಿಸಲಾಯಿತು.<br /><br />ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ದಿನ ಕಂಡು ಬರುವ ಸಂಭ್ರಮ ಇರಲಿಲ್ಲ. ಗಣ್ಯರು, ಸಾರ್ವಜನಿಕರಿಗೆ ಹಾಕಿದ್ದ ಆಸನಗಳು ಖಾಲಿ ಇದ್ದವು. ಗ್ಯಾಲರಿಗಳಲ್ಲೂ ಜನರು ಇರಲಿಲ್ಲ. ಜನರಿಲ್ಲದೇ ಕ್ರೀಡಾಂಗಣ ಬಿಕೋ ಎನ್ನುತ್ತಿತ್ತು. ಗೃಹರಕ್ಷಕ ಹಾಗೂ ಪೊಲೀಸ್ ಇಲಾಖೆಯ ಒಂದು ತುಕಡಿ ಮಾತ್ರ ಇತ್ತು.<br /><br />ಜನರಿಲ್ಲದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಬಳಿಕ ಭಾಷಣ ಓದಿದರು.<br /><br />ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಅನಿರುದ್ಧ್ ಪಿ. ಶ್ರವಣ್, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ಎಚ. ವಿಶ್ವನಾಥ್, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಇದ್ದರು. ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಕಾಟಾಚಾರಕ್ಕೆ ಶುಕ್ರವಾರ ಇಲ್ಲಿ ಆಚರಿಸಲಾಯಿತು.<br /><br />ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದ ದಿನ ಕಂಡು ಬರುವ ಸಂಭ್ರಮ ಇರಲಿಲ್ಲ. ಗಣ್ಯರು, ಸಾರ್ವಜನಿಕರಿಗೆ ಹಾಕಿದ್ದ ಆಸನಗಳು ಖಾಲಿ ಇದ್ದವು. ಗ್ಯಾಲರಿಗಳಲ್ಲೂ ಜನರು ಇರಲಿಲ್ಲ. ಜನರಿಲ್ಲದೇ ಕ್ರೀಡಾಂಗಣ ಬಿಕೋ ಎನ್ನುತ್ತಿತ್ತು. ಗೃಹರಕ್ಷಕ ಹಾಗೂ ಪೊಲೀಸ್ ಇಲಾಖೆಯ ಒಂದು ತುಕಡಿ ಮಾತ್ರ ಇತ್ತು.<br /><br />ಜನರಿಲ್ಲದ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಬಳಿಕ ಭಾಷಣ ಓದಿದರು.<br /><br />ವಿಜಯನಗರ ಜಿಲ್ಲೆ ವಿಶೇಷ ಅಧಿಕಾರಿ ಅನಿರುದ್ಧ್ ಪಿ. ಶ್ರವಣ್, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ಎಚ. ವಿಶ್ವನಾಥ್, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಇದ್ದರು. ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>