ಈ ಭಾಗ ಹಿಂದುಳಿಯಲು ಇಚ್ಛಾಶಕ್ತಿಯ ಕೊರತೆಯೇ ಮುಖ್ಯ ಕಾರಣ. ಇಲ್ಲಿ ಬೆಳೆಯುವ ಉದ್ದು, ತೊಗರಿ, ಭತ್ತ ದೇಶ-ವಿದೇಶಗಳಿಗೆ ರಫ್ತಾಗುತ್ತವೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಸುಮಾರು 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ ಎಂದರು.
ಕುಲಸಚಿವ ಎ.ಸುಬ್ಬಣ್ಣ ರೈ, ಅವಿಭಜಿತ ಬಳ್ಳಾರಿಯು ಆಡಳಿತಾತ್ಮಕವಾಗಿ ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದರೂ ಸಾಂಸ್ಕೃತಿಕವಾಗಿ ಮತ್ತು ಶೈಕ್ಷಣಿಕವಾಗಿ ಕಲ್ಯಾಣ ಕರ್ನಾಟಕದ ಲಕ್ಷಣಗಳನ್ನು ಹೊಂದಿದೆ. ಈ ಭಾಗವು ಸಾಮಾಜಿಕ ಪಿಡುಗುಗಳಿಂದ ಮುಕ್ತವಾಗಬೇಕಿದೆ ಎಂದು ಹೇಳಿದರು.