<p><strong>ಹೊಸಪೇಟೆ (ವಿಜಯನಗರ): </strong>‘ಕಲ್ಯಾಣ ಕರ್ನಾಟಕದಲ್ಲಿ ನೈಸರ್ಗಿಕ ಸಂಪನ್ಮೂಲಗಳಿಗೆ ಯಾವುದೇ ಕೊರತೆಯಿಲ್ಲ. ಆದರೆ, ಈ ಭಾಗದ ಜನರಿಗೆ ಸಂಪನ್ಮೂಲಗಳ ಫಲಗಳು ಸರಿಯಾಗಿ ಸಿಗುತ್ತಿಲ್ಲ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ನಾಗರಾಜ ಅಕ್ಕರಕ್ಕಿ ತಿಳಿಸಿದರು.</p>.<p>ಇಲ್ಲಿನ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ಅಧ್ಯಯನ ಪೀಠದಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ‘ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ ಮತ್ತು ವರ್ತಮಾನ’ ಕುರಿತು ಉಪನ್ಯಾಸ ನೀಡಿದರು.</p>.<p>ಈ ಭಾಗ ಹಿಂದುಳಿಯಲು ಇಚ್ಛಾಶಕ್ತಿಯ ಕೊರತೆಯೇ ಮುಖ್ಯ ಕಾರಣ. ಇಲ್ಲಿ ಬೆಳೆಯುವ ಉದ್ದು, ತೊಗರಿ, ಭತ್ತ ದೇಶ-ವಿದೇಶಗಳಿಗೆ ರಫ್ತಾಗುತ್ತವೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಸುಮಾರು 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ ಎಂದರು.<br />ಕುಲಸಚಿವ ಎ.ಸುಬ್ಬಣ್ಣ ರೈ, ಅವಿಭಜಿತ ಬಳ್ಳಾರಿಯು ಆಡಳಿತಾತ್ಮಕವಾಗಿ ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದರೂ ಸಾಂಸ್ಕೃತಿಕವಾಗಿ ಮತ್ತು ಶೈಕ್ಷಣಿಕವಾಗಿ ಕಲ್ಯಾಣ ಕರ್ನಾಟಕದ ಲಕ್ಷಣಗಳನ್ನು ಹೊಂದಿದೆ. ಈ ಭಾಗವು ಸಾಮಾಜಿಕ ಪಿಡುಗುಗಳಿಂದ ಮುಕ್ತವಾಗಬೇಕಿದೆ ಎಂದು ಹೇಳಿದರು.</p>.<p>ಆಡಳಿತ ಮಂಡಳಿ ಸದಸ್ಯೆ ರಾಜೇಶ್ವರಿ, ಪೀಠದ ಸಂಚಾಲಕ ಎ.ಶ್ರೀಧರ್, ಸಂಗೀತ ವಿಭಾಗದ ಅಧ್ಯಾಪಕಿ ಜ್ಯೋತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>‘ಕಲ್ಯಾಣ ಕರ್ನಾಟಕದಲ್ಲಿ ನೈಸರ್ಗಿಕ ಸಂಪನ್ಮೂಲಗಳಿಗೆ ಯಾವುದೇ ಕೊರತೆಯಿಲ್ಲ. ಆದರೆ, ಈ ಭಾಗದ ಜನರಿಗೆ ಸಂಪನ್ಮೂಲಗಳ ಫಲಗಳು ಸರಿಯಾಗಿ ಸಿಗುತ್ತಿಲ್ಲ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ನಾಗರಾಜ ಅಕ್ಕರಕ್ಕಿ ತಿಳಿಸಿದರು.</p>.<p>ಇಲ್ಲಿನ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ಅಧ್ಯಯನ ಪೀಠದಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಶನಿವಾರ ಏರ್ಪಡಿಸಿದ್ದ ‘ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ ಮತ್ತು ವರ್ತಮಾನ’ ಕುರಿತು ಉಪನ್ಯಾಸ ನೀಡಿದರು.</p>.<p>ಈ ಭಾಗ ಹಿಂದುಳಿಯಲು ಇಚ್ಛಾಶಕ್ತಿಯ ಕೊರತೆಯೇ ಮುಖ್ಯ ಕಾರಣ. ಇಲ್ಲಿ ಬೆಳೆಯುವ ಉದ್ದು, ತೊಗರಿ, ಭತ್ತ ದೇಶ-ವಿದೇಶಗಳಿಗೆ ರಫ್ತಾಗುತ್ತವೆ. ರಾಯಚೂರು ಉಷ್ಣವಿದ್ಯುತ್ ಸ್ಥಾವರವೂ ಸುಮಾರು 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ ಎಂದರು.<br />ಕುಲಸಚಿವ ಎ.ಸುಬ್ಬಣ್ಣ ರೈ, ಅವಿಭಜಿತ ಬಳ್ಳಾರಿಯು ಆಡಳಿತಾತ್ಮಕವಾಗಿ ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದರೂ ಸಾಂಸ್ಕೃತಿಕವಾಗಿ ಮತ್ತು ಶೈಕ್ಷಣಿಕವಾಗಿ ಕಲ್ಯಾಣ ಕರ್ನಾಟಕದ ಲಕ್ಷಣಗಳನ್ನು ಹೊಂದಿದೆ. ಈ ಭಾಗವು ಸಾಮಾಜಿಕ ಪಿಡುಗುಗಳಿಂದ ಮುಕ್ತವಾಗಬೇಕಿದೆ ಎಂದು ಹೇಳಿದರು.</p>.<p>ಆಡಳಿತ ಮಂಡಳಿ ಸದಸ್ಯೆ ರಾಜೇಶ್ವರಿ, ಪೀಠದ ಸಂಚಾಲಕ ಎ.ಶ್ರೀಧರ್, ಸಂಗೀತ ವಿಭಾಗದ ಅಧ್ಯಾಪಕಿ ಜ್ಯೋತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>