<p><strong>ಹಗರಿಬೊಮ್ಮನಹಳ್ಳಿ</strong>: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಿರ್ಮಾಣಗೊಂಡ ಧ್ವಜಸ್ತಂಭದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ದಿನಾಚರಣೆಯಂದು ರಾಷ್ಟ್ರಧ್ವಜ ಹಾರಾಡಲಿಲ್ಲ.</p>.<p>ಜಿಲ್ಲಾ ಖನಿಜ ನಿಧಿಯ ₹40ಲಕ್ಷ ಅಂದಾಜು ವೆಚ್ಚದಲ್ಲಿ ಧ್ವಜಸ್ತಂಭ ನಿರ್ಮಿಸಲಾಗಿದೆ. ಈಚೆಗೆ ನಡೆದ ಸ್ವಾತಂತ್ರ್ಯ ದಿನಾಚರಣೆಯಂದು ಶಾಸಕ ನೇಮರಾಜನಾಯ್ಕ ಮೊದಲ ಧ್ವಜಾರೋಹಣ ನೆರವೇರಿಸಿದ್ದರು.</p>.<p>ಒಂದು ತಿಂಗಳ ಅಂತರದಲ್ಲಿ ನಡೆದ ಕಲ್ಯಾಣ ಕರ್ನಾಟಕ ದಿನಾಚರಣೆಯಂದು ರಾಷ್ಟ್ರಧ್ವಜ ಆರೋಹಣ ಮಾಡದಿರುವುದಕ್ಕೆ ವಿವಿಧ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ತಾಲ್ಲೂಕಿನ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಧ್ವಜಾರೋಹಣ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಧ್ವಜಸ್ತಂಭದಲ್ಲಿಯೂ ನಡೆಯಬೇಕಿತ್ತು’ ಎಂದು ಬುದ್ಧ ಬಸವ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಯೋಗೀಶ್ ಮನಂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಿರ್ಮಾಣಗೊಂಡ ಧ್ವಜಸ್ತಂಭದಲ್ಲಿ ಮಂಗಳವಾರ ಕಲ್ಯಾಣ ಕರ್ನಾಟಕ ದಿನಾಚರಣೆಯಂದು ರಾಷ್ಟ್ರಧ್ವಜ ಹಾರಾಡಲಿಲ್ಲ.</p>.<p>ಜಿಲ್ಲಾ ಖನಿಜ ನಿಧಿಯ ₹40ಲಕ್ಷ ಅಂದಾಜು ವೆಚ್ಚದಲ್ಲಿ ಧ್ವಜಸ್ತಂಭ ನಿರ್ಮಿಸಲಾಗಿದೆ. ಈಚೆಗೆ ನಡೆದ ಸ್ವಾತಂತ್ರ್ಯ ದಿನಾಚರಣೆಯಂದು ಶಾಸಕ ನೇಮರಾಜನಾಯ್ಕ ಮೊದಲ ಧ್ವಜಾರೋಹಣ ನೆರವೇರಿಸಿದ್ದರು.</p>.<p>ಒಂದು ತಿಂಗಳ ಅಂತರದಲ್ಲಿ ನಡೆದ ಕಲ್ಯಾಣ ಕರ್ನಾಟಕ ದಿನಾಚರಣೆಯಂದು ರಾಷ್ಟ್ರಧ್ವಜ ಆರೋಹಣ ಮಾಡದಿರುವುದಕ್ಕೆ ವಿವಿಧ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ತಾಲ್ಲೂಕಿನ ಎಲ್ಲ ಸರ್ಕಾರಿ ಕಚೇರಿಗಳಲ್ಲೂ ಧ್ವಜಾರೋಹಣ ಮಾಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಧ್ವಜಸ್ತಂಭದಲ್ಲಿಯೂ ನಡೆಯಬೇಕಿತ್ತು’ ಎಂದು ಬುದ್ಧ ಬಸವ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಯೋಗೀಶ್ ಮನಂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>