<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ದೇವದಾಸಿ ಕುಟುಂಬದಲ್ಲಿ ಜನಿಸಿದ ಕಾಮಾಕ್ಷಿ ಅವರು ತಮ್ಮ ಛಲ, ಸಾಧನೆಯಿಂದ ಇಂಗ್ಲೆಂಡ್ನ ಸಸೆಕ್ಸ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆ ಆಗಿರುವುದಕ್ಕೆ ಬಹುತೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರಿಗೆ ನೆರವಿಗೆ ಹಲವರು ಮುಂದಾಗಿದ್ದಾರೆ.</p>.<p>‘ಪ್ರಜಾವಾಣಿ’ಯ ಆ.6ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿದ್ದನ್ನು ಗಮನಿಸಿ ನೂರಾರು ಕರೆಗಳು ಬಂದಿದ್ದು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಸಂಸದ ಗೋವಿಂದ ಕಾರಜೋಳ ಅವರ ಪುತ್ರ, ಯುವ ಭಾರತ ಸಂಸ್ಥೆಯ ಅಧ್ಯಕ್ಷ ಉಮೇಶ್ ಕಾರಜೋಳ ಅವರು ನೆರವಿನ ಭರವಸೆ ನೀಡಿದ್ದಾರೆ.</p>.<p>ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಫೇಸ್ಬುಕ್ನಲ್ಲಿ ಈ ವರದಿಯನ್ನು ಟ್ಯಾಗ್ ಮಾಡಿ, ‘ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿದ ಪ್ರತಿ ಯೋಜನೆಯೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅದರ ಸಂಪೂರ್ಣ ಪ್ರಯೋಜನ ಸಿಗುವಂತೆ ಮಾಡುತ್ತವೆ ಎನ್ನುವುದಕ್ಕೆ ಈ ಹಿಂದೆ ನಾನು ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ಜಾರಿಗೊಳಿಸಿದ್ದ ‘ಪ್ರಬುದ್ಧ’ ಯೋಜನೆಯೇ ಸಾಕ್ಷಿ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ದೇವದಾಸಿ ಕುಟುಂಬದಲ್ಲಿ ಜನಿಸಿದ ಕಾಮಾಕ್ಷಿ ಅವರು ತಮ್ಮ ಛಲ, ಸಾಧನೆಯಿಂದ ಇಂಗ್ಲೆಂಡ್ನ ಸಸೆಕ್ಸ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಆಯ್ಕೆ ಆಗಿರುವುದಕ್ಕೆ ಬಹುತೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರಿಗೆ ನೆರವಿಗೆ ಹಲವರು ಮುಂದಾಗಿದ್ದಾರೆ.</p>.<p>‘ಪ್ರಜಾವಾಣಿ’ಯ ಆ.6ರ ಸಂಚಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿದ್ದನ್ನು ಗಮನಿಸಿ ನೂರಾರು ಕರೆಗಳು ಬಂದಿದ್ದು, ವಸತಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಸಂಸದ ಗೋವಿಂದ ಕಾರಜೋಳ ಅವರ ಪುತ್ರ, ಯುವ ಭಾರತ ಸಂಸ್ಥೆಯ ಅಧ್ಯಕ್ಷ ಉಮೇಶ್ ಕಾರಜೋಳ ಅವರು ನೆರವಿನ ಭರವಸೆ ನೀಡಿದ್ದಾರೆ.</p>.<p>ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಫೇಸ್ಬುಕ್ನಲ್ಲಿ ಈ ವರದಿಯನ್ನು ಟ್ಯಾಗ್ ಮಾಡಿ, ‘ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿದ ಪ್ರತಿ ಯೋಜನೆಯೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅದರ ಸಂಪೂರ್ಣ ಪ್ರಯೋಜನ ಸಿಗುವಂತೆ ಮಾಡುತ್ತವೆ ಎನ್ನುವುದಕ್ಕೆ ಈ ಹಿಂದೆ ನಾನು ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿದ್ದಾಗ ಜಾರಿಗೊಳಿಸಿದ್ದ ‘ಪ್ರಬುದ್ಧ’ ಯೋಜನೆಯೇ ಸಾಕ್ಷಿ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>