ಮೈಸೂರಿನಿಂದ ಹೊಸಪೇಟೆ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಆಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೇ ಮಾರ್ಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ನಟ ಅಜಯ್ ರಾವ್ ಗಾಯಗೊಂಡವರನ್ನು ಗಮನಿಸಿ, ಕಾರು ನಿಲ್ಲಿಸಿ, ಅವರ ಕಾರಿನಲ್ಲಿದ್ದ ಪ್ರಥಮ ಚಿಕಿತ್ಸೆಯ ಪೆಟ್ಟಿಗೆಯೊಳಗಿಂದ ಔಷಧ ತೆಗೆದುಕೊಂಡು ಹೋಗಿ ಉಪಚರಿಸಿದ್ದಾರೆ. ಬಳಿಕ ಅಲ್ಲಿಗೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಬಂದು, ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.