ಹೊಸಪೇಟೆ (ವಿಜಯನಗರ): ‘ಪ್ರಸ್ತುತ ದಿನಗಳಲ್ಲಿ ಕನ್ನಡ ಭಾಷೆಯ ಬಳಕೆಯು ಕಡಿಮೆಯಾಗಿ, ಕಂಗ್ಲೀಷ್ ಬಳಕೆ ಹೆಚ್ಚಾಗುತ್ತಿದೆ. ಕನ್ನಡ ಶಾಲೆಗಳು ಮುಚ್ಚಿ, ಕಾನ್ವೆಂಟ್ಗಳು ತಲೆ ಎತ್ತುತ್ತಿವೆ. ಇದು ಕನ್ನಡ ಭಾಷೆ ಅಪಾಯದ ಅಂಚಿನಲ್ಲಿರುವುದು ಸೂಚಿಸುತ್ತದೆ’ ಎಂದು 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಪ್ರೊ. ದೊಡ್ಡರಂಗೇಗೌಡ ಹೇಳಿದರು.