ಸುಕ್ಷೇತ್ರದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರಿಂದ ಭಂಡಾರದ ಆಶೀರ್ವಾದ ಪಡೆದು ಸುಕ್ಷೇತ್ರದ ಪರಂಪರೆಯ ಸಂಕೇತವಾಗಿರುವ ಬಿಲ್ಲು ಏರಿದ ಗೊರವಯ್ಯ ರಾಮಣ್ಣ, ‘ಸದ್ದಲೇ’ ಎಂದು ಕೂಗುತ್ತಿದ್ದಂತೆ ಡೆಂಕನ ಮರಡಿಯಲ್ಲಿ ಸೇರಿದ್ದ ಭಕ್ತ ಪರಿಷೆ, ಜೀವಸಂಕುಲ ಕ್ಷಣಕಾಲ ಸ್ತಬ್ಧವಾಯಿತು. ಆಗ ಗೊರವಯ್ಯ ಮೇಲಿನಂತೆ ಕಾರಣಿಕ ನುಡಿದು ಪಶ್ಚಿಮ ದಿಕ್ಕಿಗೆ ಹಿಮ್ಮುಖವಾಗಿ ಜಿಗಿದರು. ನೆರೆದಿದ್ದ ಗೊರವಸಮೂಹ ಅವರನ್ನು ಕಂಬಳಿಯಲ್ಲಿ ಹಿಡಿಯಿತು.