ಇನ್ನು, ವಿಜಯನಗರ ಸಾಮಾನ್ಯ ಕ್ಷೇತ್ರದ ಟಿಕೆಟ್ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರಿಗೆ ನೀಡಲಾಗಿದೆ. ಕ್ಷೇತ್ರದ ಟಿಕೆಟ್ಗೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಒಟ್ಟು ಹನ್ನೆರಡು ಜನ ಅರ್ಜಿ ಸಲ್ಲಿಸಿದ್ದರು. ಮಾಜಿಶಾಸಕ ಸಿರಾಜ್ ಶೇಖ್, ಕೊಪ್ಪಳ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವೆಂಕಟರಾವ ಘೋರ್ಪಡೆ ಸೇರಿದಂತೆ ಇತರರಿದ್ದರು. ಆದರೆ, ಪಕ್ಷವು ಅಂತಿಮವಾಗಿ ಗವಿಯಪ್ಪ ಅವರಿಗೆ ಟಿಕೆಟ್ ನೀಡಿದೆ.