<p><strong>ಹೊಸಪೇಟೆ </strong>(ವಿಜಯನಗರ): ವಿಜಯನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಶನಿವಾರ ಅಧಿಕೃತವಾಗಿ ಘೋಷಿಸಿದೆ. </p>.<p>ಇದರಲ್ಲಿ ಇಬ್ಬರು ಹಾಲಿ ಹಾಗೂ ಒಬ್ಬ ಮಾಜಿ ಶಾಸಕನಿಗೆ ಟಿಕೆಟ್ ನೀಡಿದೆ. ಇನ್ನೆರಡು ಕ್ಷೇತ್ರಗಳಿಗೆ ಯಾವುದೇ ಹೆಸರು ಘೋಷಿಸಿಲ್ಲ.<br />ಹಗರಿಬೊಮ್ಮನಹಳ್ಳಿ ಹಾಗೂ ಹೂವಿನಹಡಗಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿಗೆ ಪಕ್ಷವು ಕ್ರಮವಾಗಿ ಹಾಲಿ ಶಾಸಕರಾದ ಭೀಮ ನಾಯ್ಕ ಹಾಗೂ ಪಿ.ಟಿ. ಪರಮೇಶ್ವರ ನಾಯ್ಕ ಅವರಿಗೆ ಟಿಕೆಟ್ ಘೋಷಿಸಿದೆ. ಇಬ್ಬರು ಕಳೆದೆರಡು ಚುನಾವಣೆಗಳಲ್ಲಿ ಜಯ ಗಳಿಸಿದ್ದಾರೆ.</p>.<p>ಈಗ ಪುನಃ ಟಿಕೆಟ್ ಸಿಕ್ಕಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಭೀಮ ನಾಯ್ಕ ಹಾಗೂ ಪಿ.ಟಿ. ಪರಮೇಶ್ವರ ಇಬ್ಬರು ಲಂಬಾಣಿ ಸಮುದಾಯದವರು. ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಮಾದಿಗ ಸಮಾಜದವರಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇತ್ತು. ಆದರೆ, ಪಕ್ಷ ಅದಕ್ಕೆ ಮನ್ನಣೆ ನೀಡಿಲ್ಲ.</p>.<p>ಇನ್ನು, ವಿಜಯನಗರ ಸಾಮಾನ್ಯ ಕ್ಷೇತ್ರದ ಟಿಕೆಟ್ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರಿಗೆ ನೀಡಲಾಗಿದೆ. ಕ್ಷೇತ್ರದ ಟಿಕೆಟ್ಗೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಒಟ್ಟು ಹನ್ನೆರಡು ಜನ ಅರ್ಜಿ ಸಲ್ಲಿಸಿದ್ದರು. ಮಾಜಿಶಾಸಕ ಸಿರಾಜ್ ಶೇಖ್, ಕೊಪ್ಪಳ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವೆಂಕಟರಾವ ಘೋರ್ಪಡೆ ಸೇರಿದಂತೆ ಇತರರಿದ್ದರು. ಆದರೆ, ಪಕ್ಷವು ಅಂತಿಮವಾಗಿ ಗವಿಯಪ್ಪ ಅವರಿಗೆ ಟಿಕೆಟ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ </strong>(ವಿಜಯನಗರ): ವಿಜಯನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಶನಿವಾರ ಅಧಿಕೃತವಾಗಿ ಘೋಷಿಸಿದೆ. </p>.<p>ಇದರಲ್ಲಿ ಇಬ್ಬರು ಹಾಲಿ ಹಾಗೂ ಒಬ್ಬ ಮಾಜಿ ಶಾಸಕನಿಗೆ ಟಿಕೆಟ್ ನೀಡಿದೆ. ಇನ್ನೆರಡು ಕ್ಷೇತ್ರಗಳಿಗೆ ಯಾವುದೇ ಹೆಸರು ಘೋಷಿಸಿಲ್ಲ.<br />ಹಗರಿಬೊಮ್ಮನಹಳ್ಳಿ ಹಾಗೂ ಹೂವಿನಹಡಗಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿಗೆ ಪಕ್ಷವು ಕ್ರಮವಾಗಿ ಹಾಲಿ ಶಾಸಕರಾದ ಭೀಮ ನಾಯ್ಕ ಹಾಗೂ ಪಿ.ಟಿ. ಪರಮೇಶ್ವರ ನಾಯ್ಕ ಅವರಿಗೆ ಟಿಕೆಟ್ ಘೋಷಿಸಿದೆ. ಇಬ್ಬರು ಕಳೆದೆರಡು ಚುನಾವಣೆಗಳಲ್ಲಿ ಜಯ ಗಳಿಸಿದ್ದಾರೆ.</p>.<p>ಈಗ ಪುನಃ ಟಿಕೆಟ್ ಸಿಕ್ಕಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಭೀಮ ನಾಯ್ಕ ಹಾಗೂ ಪಿ.ಟಿ. ಪರಮೇಶ್ವರ ಇಬ್ಬರು ಲಂಬಾಣಿ ಸಮುದಾಯದವರು. ಎರಡು ಕ್ಷೇತ್ರಗಳ ಪೈಕಿ ಒಂದರಲ್ಲಿ ಮಾದಿಗ ಸಮಾಜದವರಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇತ್ತು. ಆದರೆ, ಪಕ್ಷ ಅದಕ್ಕೆ ಮನ್ನಣೆ ನೀಡಿಲ್ಲ.</p>.<p>ಇನ್ನು, ವಿಜಯನಗರ ಸಾಮಾನ್ಯ ಕ್ಷೇತ್ರದ ಟಿಕೆಟ್ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರಿಗೆ ನೀಡಲಾಗಿದೆ. ಕ್ಷೇತ್ರದ ಟಿಕೆಟ್ಗೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಒಟ್ಟು ಹನ್ನೆರಡು ಜನ ಅರ್ಜಿ ಸಲ್ಲಿಸಿದ್ದರು. ಮಾಜಿಶಾಸಕ ಸಿರಾಜ್ ಶೇಖ್, ಕೊಪ್ಪಳ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವೆಂಕಟರಾವ ಘೋರ್ಪಡೆ ಸೇರಿದಂತೆ ಇತರರಿದ್ದರು. ಆದರೆ, ಪಕ್ಷವು ಅಂತಿಮವಾಗಿ ಗವಿಯಪ್ಪ ಅವರಿಗೆ ಟಿಕೆಟ್ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>