<p><strong>ಹೊಸಪೇಟೆ (ವಿಜಯನಗರ): </strong>‘ಮುಹೂರ್ತ ನೋಡಿ ಖಾತೆ ಸ್ವೀಕರಿಸುವೆ. ದೇವರ ಮುಹೂರ್ತ, ನನ್ನ ನಕ್ಷತ್ರ ನೋಡಿಕೊಂಡು ಖಾತೆ ಸ್ವೀಕರಿಸುತ್ತೇನೆ’ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.<br /><br />ಭಾನುವಾರ ನಗರದ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.<br /><br />‘ರಾಜ್ಯದಲ್ಲಿ ದಿಟ್ಟ, ಸಮರ್ಥ ಅಧಿಕಾರಿಗಳಿದ್ದಾರೆ. ಅಲ್ಲಿಯವರೆಗೆ ಅವರು ಖಾತೆ ನೋಡುತ್ತಾರೆ. ನಾನು ಅಧಿಕಾರ ವಹಿಸಿಕೊಳ್ಳದಿದ್ದರೆ ಅಭಿವೃದ್ಧಿ ಕುಂಠಿತವಾಗುವುದಿಲ್ಲ. ಜನಪ್ರತಿನಿಧಿಗಳ ಮೇಲೆ ವ್ಯವಸ್ಥೆ ನಡೀತಾ ಇಲ್ಲ. ಶಾಸಕಾಂಗ, ಕಾರ್ಯಾಂಗ ಬಂಡಿ ಇದ್ದಂತೆ’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/india-75th-independence-day-amrit-mahotsav-basavaraj-bommai-karnataka-bengaluru-857940.html" target="_blank">ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 14 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ</a></strong><br /><br />‘ವಿಜಯನಗರ ಜಿಲ್ಲೆಯಲ್ಲಿ ಕಚೇರಿಗಳ ನಿರ್ಮಾಣ, ಅಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ. ಆರ್ಥಿಕ ಇಲಾಖೆಯಿಂದ ಈಗಾಗಲೇ ಜಿಲ್ಲೆಗೆ 50 ಕೋಟಿ ಬಿಡುಗಡೆಯಾಗಿದೆ. ಖಾತೆ ಗೊಂದಲದ ಬಗ್ಗೆ ನಾನೇನೂ ಹೇಳಲಾರೆ’ ಎಂದು ಹೇಳಿ ನಿರ್ಗಮಿಸಿದರು.<br /><br />ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಹಂಚಿಕೆ ಮಾಡಲಾಗಿದೆ. ಆದರೆ, ಇದುವರೆಗೆ ಅವರು ಖಾತೆ ವಹಿಸಿಕೊಂಡಿಲ್ಲ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cm-basavaraj-bommai-said-there-was-no-compromise-on-the-mekedatu-project-857942.html" target="_blank">ಮೇಕೆದಾಟು ಯೋಜನೆ ಅನುಷ್ಠಾನ ಖಚಿತ: ಸಿಎಂ ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>‘ಮುಹೂರ್ತ ನೋಡಿ ಖಾತೆ ಸ್ವೀಕರಿಸುವೆ. ದೇವರ ಮುಹೂರ್ತ, ನನ್ನ ನಕ್ಷತ್ರ ನೋಡಿಕೊಂಡು ಖಾತೆ ಸ್ವೀಕರಿಸುತ್ತೇನೆ’ ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.<br /><br />ಭಾನುವಾರ ನಗರದ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.<br /><br />‘ರಾಜ್ಯದಲ್ಲಿ ದಿಟ್ಟ, ಸಮರ್ಥ ಅಧಿಕಾರಿಗಳಿದ್ದಾರೆ. ಅಲ್ಲಿಯವರೆಗೆ ಅವರು ಖಾತೆ ನೋಡುತ್ತಾರೆ. ನಾನು ಅಧಿಕಾರ ವಹಿಸಿಕೊಳ್ಳದಿದ್ದರೆ ಅಭಿವೃದ್ಧಿ ಕುಂಠಿತವಾಗುವುದಿಲ್ಲ. ಜನಪ್ರತಿನಿಧಿಗಳ ಮೇಲೆ ವ್ಯವಸ್ಥೆ ನಡೀತಾ ಇಲ್ಲ. ಶಾಸಕಾಂಗ, ಕಾರ್ಯಾಂಗ ಬಂಡಿ ಇದ್ದಂತೆ’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/india-75th-independence-day-amrit-mahotsav-basavaraj-bommai-karnataka-bengaluru-857940.html" target="_blank">ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 14 ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ</a></strong><br /><br />‘ವಿಜಯನಗರ ಜಿಲ್ಲೆಯಲ್ಲಿ ಕಚೇರಿಗಳ ನಿರ್ಮಾಣ, ಅಧಿಕಾರಿಗಳ ನೇಮಕ ಪ್ರಕ್ರಿಯೆ ನಡೆದಿದೆ. ಆರ್ಥಿಕ ಇಲಾಖೆಯಿಂದ ಈಗಾಗಲೇ ಜಿಲ್ಲೆಗೆ 50 ಕೋಟಿ ಬಿಡುಗಡೆಯಾಗಿದೆ. ಖಾತೆ ಗೊಂದಲದ ಬಗ್ಗೆ ನಾನೇನೂ ಹೇಳಲಾರೆ’ ಎಂದು ಹೇಳಿ ನಿರ್ಗಮಿಸಿದರು.<br /><br />ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಹಂಚಿಕೆ ಮಾಡಲಾಗಿದೆ. ಆದರೆ, ಇದುವರೆಗೆ ಅವರು ಖಾತೆ ವಹಿಸಿಕೊಂಡಿಲ್ಲ.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cm-basavaraj-bommai-said-there-was-no-compromise-on-the-mekedatu-project-857942.html" target="_blank">ಮೇಕೆದಾಟು ಯೋಜನೆ ಅನುಷ್ಠಾನ ಖಚಿತ: ಸಿಎಂ ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>