<p><strong>ಹೊಸಪೇಟೆ (ವಿಜಯನಗರ):</strong> ಹೊಸಪೇಟೆ ನಗರಸಭೆಯ 22ನೇ ವಾರ್ಡಿನಲ್ಲಿ ಜಯ ಗಳಿಸುವ ಮೂಲಕ ‘ಆಮ್ ಆದ್ಮಿ’ ಪಕ್ಷ ಖಾತೆ ತೆರೆದಿದೆ. ಪಕ್ಷದ ಅಭ್ಯರ್ಥಿ ಶೇಕ್ಷಾವಲಿ ಅವರು ಎಎಪಿಯಿಂದ ಕಣಕ್ಕಿಳಿದಿದ್ದರು. ಮೊದಲ ಚುನಾವಣೆಯಲ್ಲೇ ಮತದಾರರು ಎಎಪಿ ಕೈ ಹಿಡಿದಿದ್ದಾರೆ.</p>.<p><strong>ಖಾರದಪುಡಿ ಮಹೇಶ ಗೆಲುವು:</strong>ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದ್ದ ಖಾರದಪುಡಿ ಮಹೇಶ ನಗರಸಭೆ ಚುನಾವಣೆಯಲ್ಲಿ ಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ನಿಂದ 20ನೇ ವಾರ್ಡ್ನಿಂದ ಮಹೇಶ ಸ್ಪರ್ಧಿಸಿದ್ದರು. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದ ಕಾಂಗ್ರೆಸ್ ಪಕ್ಷವು, ಮಹೇಶ ಅವರಿಗೆ ಟಿಕೆಟ್ ನೀಡಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾಗಿತ್ತು.</p>.<p><strong>1 ಮತ ಅಂತರದಲ್ಲಿ ಗೆಲುವು:</strong>ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಒಂದನೇ ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿ ಎಲ್.ವಸಂತ 1 ಮತದ ಅಂತರದಿಂದ ಜಯಶಾಲಿಯಾಗಿದ್ದಾರೆ. ವಸಂತ 166 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಎಂ. ವಿರೂಪಾಕ್ಷ 165 ಮತ ಗಳಿಸಿದ್ದಾರೆ. ಎರಡು ಬಾರಿ ಮರು ಮತ ಎಣಿಕೆ ನಡೆಸಲಾಯಿತು.</p>.<p><strong>5 ಮತಗಳಿಂದ ಜಯ:</strong>ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆಯ 1ನೇ ವಾರ್ಡ್ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಸರಸ್ವತಿ 5 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮಮತಾ ಅವರನ್ನು ಸೋಲಿಸಿದ್ದಾರೆ.</p>.<p><strong>ಇದನ್ನೂ ಓದಿ...<a href="http://prajavani.net/district/haveri/karnataka-politics-local-body-election-results-2021-basavaraj-bommai-bjp-haveri-897560.html" target="_blank">ಬಂಕಾಪುರ ಪುರಸಭೆ ‘ಕೈ’ತೆಕ್ಕೆಗೆ:ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಹೊಸಪೇಟೆ ನಗರಸಭೆಯ 22ನೇ ವಾರ್ಡಿನಲ್ಲಿ ಜಯ ಗಳಿಸುವ ಮೂಲಕ ‘ಆಮ್ ಆದ್ಮಿ’ ಪಕ್ಷ ಖಾತೆ ತೆರೆದಿದೆ. ಪಕ್ಷದ ಅಭ್ಯರ್ಥಿ ಶೇಕ್ಷಾವಲಿ ಅವರು ಎಎಪಿಯಿಂದ ಕಣಕ್ಕಿಳಿದಿದ್ದರು. ಮೊದಲ ಚುನಾವಣೆಯಲ್ಲೇ ಮತದಾರರು ಎಎಪಿ ಕೈ ಹಿಡಿದಿದ್ದಾರೆ.</p>.<p><strong>ಖಾರದಪುಡಿ ಮಹೇಶ ಗೆಲುವು:</strong>ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದ್ದ ಖಾರದಪುಡಿ ಮಹೇಶ ನಗರಸಭೆ ಚುನಾವಣೆಯಲ್ಲಿ ಜಯಶಾಲಿಯಾಗಿದ್ದಾರೆ. ಕಾಂಗ್ರೆಸ್ನಿಂದ 20ನೇ ವಾರ್ಡ್ನಿಂದ ಮಹೇಶ ಸ್ಪರ್ಧಿಸಿದ್ದರು. ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸಿದ್ದ ಕಾಂಗ್ರೆಸ್ ಪಕ್ಷವು, ಮಹೇಶ ಅವರಿಗೆ ಟಿಕೆಟ್ ನೀಡಿದ್ದಕ್ಕೆ ತೀವ್ರ ಟೀಕೆ ವ್ಯಕ್ತವಾಗಿತ್ತು.</p>.<p><strong>1 ಮತ ಅಂತರದಲ್ಲಿ ಗೆಲುವು:</strong>ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಒಂದನೇ ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿ ಎಲ್.ವಸಂತ 1 ಮತದ ಅಂತರದಿಂದ ಜಯಶಾಲಿಯಾಗಿದ್ದಾರೆ. ವಸಂತ 166 ಮತ ಪಡೆದರೆ, ಅವರ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಎಂ. ವಿರೂಪಾಕ್ಷ 165 ಮತ ಗಳಿಸಿದ್ದಾರೆ. ಎರಡು ಬಾರಿ ಮರು ಮತ ಎಣಿಕೆ ನಡೆಸಲಾಯಿತು.</p>.<p><strong>5 ಮತಗಳಿಂದ ಜಯ:</strong>ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆಯ 1ನೇ ವಾರ್ಡ್ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಸರಸ್ವತಿ 5 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮಮತಾ ಅವರನ್ನು ಸೋಲಿಸಿದ್ದಾರೆ.</p>.<p><strong>ಇದನ್ನೂ ಓದಿ...<a href="http://prajavani.net/district/haveri/karnataka-politics-local-body-election-results-2021-basavaraj-bommai-bjp-haveri-897560.html" target="_blank">ಬಂಕಾಪುರ ಪುರಸಭೆ ‘ಕೈ’ತೆಕ್ಕೆಗೆ:ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುಖಭಂಗ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>