<p><strong>ಹೊಸಪೇಟೆ (ವಿಜಯನಗರ):</strong> ವಿಜಯನಗರ ಜಿಲ್ಲೆಯಾದ್ಯಂತ ಗುರುವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಮಳೆಯಲ್ಲೇ ಸಾಗುತ್ತಿರುವ ದೃಶ್ಯ ಕಾಣಿಸಿದೆ. ಮಳೆ ಅಷ್ಟೇನೂ ಬಿರುಸಿನಿಂದ ಸುರಿಯದ ಕಾರಣ ಜನಜೀವನ ಸಹಜವಾಗಿ ಸಾಗಿದೆ.</p>.ದಕ್ಷಿಣ ಕನ್ನಡ | ಭಾರಿ ಮಳೆ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ.<p>ಬುಧವಾರ ರಾತ್ರಿ ಕೆಲವೆಡೆ ಭಾರಿ ಮಳೆ ಸುರಿದಿತ್ತು. ಗುರುವಾರ ಬೆಳಿಗ್ಗೆ ದಟ್ಟ ಮೋಡ ಆವರಿಸಿಕೊಂಡಿತ್ತು. 7 ಗಂಟೆಯ ಬಳಿಕ ಹೊಸಪೇಟೆ ನಗರ ಮತ್ತು ಸುತ್ತಮುತ್ತ ಲಘುವಾಗಿ ಮಳೆ ಸುರಿಯಲು ಆರಂಭಿಸಿತು. ಸತತ ಎರಡು ಗಂಟೆಯಿಂದ ಮಳೆ ಮುಂದುವರಿದಿದೆ.</p><p>ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ, ಕೂಡ್ಲಿಗಿ ತಾಲ್ಲೂಕುಗಳಲ್ಲಿ ಸಹ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಜಿಲ್ಲೆಯ ಹಲವೆಡೆ ಈಗಾಗಲೇ ಬಿತ್ತನೆ ಕಾರ್ಯ ಆರಂಭವಾಗಿದೆ.</p>.ಬಸವಾಪಟ್ಟಣ | ‘ಹದ ಮಳೆ; 4,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗೆ ಸಿದ್ಧತೆ’.<p>ತುಂಗಭದ್ರಾ ಜಲಾಶಯಕ್ಕೆ ಸದ್ಯ 5,306 ಕ್ಯುಸೆಕ್ನಷ್ಟು ಒಳಹರಿವು ಇದ್ದು, ಜಿಲಾಶಯದಲ್ಲಿ 24.88 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಗರಿಷ್ಠ 1,633 ಅಡಿ ಎತ್ತರದ ಅಣೆಕಟ್ಟೆಯಲ್ಲಿ ಸದ್ಯ 1,602.47 ಅಡಿ ಮಟ್ಟದಲ್ಲಿ ನೀರು ಇದೆ. ಹೊಸ ಕ್ರಸ್ಟ್ಗೇಟ್ಗಳನ್ನು ಅಳವಡಿಸದ ಕಾರಣ ಈ ಬಾರಿ ಗರಿಷ್ಠ ಮಟ್ಟಕ್ಕೆ ನೀರು ನಿಲ್ಲಿಸುವುದಿಲ್ಲ ಎಂದು ತುಂಗಭದ್ರಾ ಮಂಡಳಿ ಈಗಾಗಲೇ ತಿಳಿಸಿದೆ. ಹೀಗಾಗಿ ಇನ್ನು ಕೇವಲ 24 ಅಡಿಯಷ್ಟು ನೀರು ತುಂಬಿದರೆ (80 ಟಿಎಂಸಿ ಅಡಿ ನೀರು ಸಂಗ್ರಹ) ಕ್ರಸ್ಟ್ಗೇಟ್ಗಳನ್ನು ತೆರೆದು ನೀರನ್ನು ನದಿಗೆ ಹರಿಸುವುದು ಅನಿವಾರ್ಯವಾಗಲಿದೆ</p>.ನರಸಿಂಹರಾಜಪುರ ಧಾರಾಕಾರ ಮಳೆ: ತುಂಬಿ ಹರಿದ ಚರಂಡಿ, ರಸ್ತೆ ತುಂಬಾ ನೀರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ವಿಜಯನಗರ ಜಿಲ್ಲೆಯಾದ್ಯಂತ ಗುರುವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಮಳೆಯಲ್ಲೇ ಸಾಗುತ್ತಿರುವ ದೃಶ್ಯ ಕಾಣಿಸಿದೆ. ಮಳೆ ಅಷ್ಟೇನೂ ಬಿರುಸಿನಿಂದ ಸುರಿಯದ ಕಾರಣ ಜನಜೀವನ ಸಹಜವಾಗಿ ಸಾಗಿದೆ.</p>.ದಕ್ಷಿಣ ಕನ್ನಡ | ಭಾರಿ ಮಳೆ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ.<p>ಬುಧವಾರ ರಾತ್ರಿ ಕೆಲವೆಡೆ ಭಾರಿ ಮಳೆ ಸುರಿದಿತ್ತು. ಗುರುವಾರ ಬೆಳಿಗ್ಗೆ ದಟ್ಟ ಮೋಡ ಆವರಿಸಿಕೊಂಡಿತ್ತು. 7 ಗಂಟೆಯ ಬಳಿಕ ಹೊಸಪೇಟೆ ನಗರ ಮತ್ತು ಸುತ್ತಮುತ್ತ ಲಘುವಾಗಿ ಮಳೆ ಸುರಿಯಲು ಆರಂಭಿಸಿತು. ಸತತ ಎರಡು ಗಂಟೆಯಿಂದ ಮಳೆ ಮುಂದುವರಿದಿದೆ.</p><p>ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ, ಕೂಡ್ಲಿಗಿ ತಾಲ್ಲೂಕುಗಳಲ್ಲಿ ಸಹ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಜಿಲ್ಲೆಯ ಹಲವೆಡೆ ಈಗಾಗಲೇ ಬಿತ್ತನೆ ಕಾರ್ಯ ಆರಂಭವಾಗಿದೆ.</p>.ಬಸವಾಪಟ್ಟಣ | ‘ಹದ ಮಳೆ; 4,500 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಗೆ ಸಿದ್ಧತೆ’.<p>ತುಂಗಭದ್ರಾ ಜಲಾಶಯಕ್ಕೆ ಸದ್ಯ 5,306 ಕ್ಯುಸೆಕ್ನಷ್ಟು ಒಳಹರಿವು ಇದ್ದು, ಜಿಲಾಶಯದಲ್ಲಿ 24.88 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಗರಿಷ್ಠ 1,633 ಅಡಿ ಎತ್ತರದ ಅಣೆಕಟ್ಟೆಯಲ್ಲಿ ಸದ್ಯ 1,602.47 ಅಡಿ ಮಟ್ಟದಲ್ಲಿ ನೀರು ಇದೆ. ಹೊಸ ಕ್ರಸ್ಟ್ಗೇಟ್ಗಳನ್ನು ಅಳವಡಿಸದ ಕಾರಣ ಈ ಬಾರಿ ಗರಿಷ್ಠ ಮಟ್ಟಕ್ಕೆ ನೀರು ನಿಲ್ಲಿಸುವುದಿಲ್ಲ ಎಂದು ತುಂಗಭದ್ರಾ ಮಂಡಳಿ ಈಗಾಗಲೇ ತಿಳಿಸಿದೆ. ಹೀಗಾಗಿ ಇನ್ನು ಕೇವಲ 24 ಅಡಿಯಷ್ಟು ನೀರು ತುಂಬಿದರೆ (80 ಟಿಎಂಸಿ ಅಡಿ ನೀರು ಸಂಗ್ರಹ) ಕ್ರಸ್ಟ್ಗೇಟ್ಗಳನ್ನು ತೆರೆದು ನೀರನ್ನು ನದಿಗೆ ಹರಿಸುವುದು ಅನಿವಾರ್ಯವಾಗಲಿದೆ</p>.ನರಸಿಂಹರಾಜಪುರ ಧಾರಾಕಾರ ಮಳೆ: ತುಂಬಿ ಹರಿದ ಚರಂಡಿ, ರಸ್ತೆ ತುಂಬಾ ನೀರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>