ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆ: ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳ

Last Updated 22 ಮೇ 2022, 15:14 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಹೆಚ್ಚಳವಾಗಿದೆ.

ಪ್ರತಿದಿನ ಜಲಾಶಯಕ್ಕೆ 89,664 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 1,605.06 ಅಡಿ ನೀರಿನ ಸಂಗ್ರಹವಿದೆ. 255 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಶನಿವಾರ 61,000 ಕ್ಯುಸೆಕ್‌ ಒಳಹರಿವು ದಾಖಲಾಗಿತ್ತು. ದಿನೇ ದಿನೇ ಒಳಹರಿವು ಹೆಚ್ಚಾಗುತ್ತಿದೆ. ನಿತ್ಯ ಸರಾಸರಿ 7ರಿಂದ 8 ಟಿಎಂಸಿ ಅಡಿ ನೀರು ಅಣೆಕಟ್ಟೆಗೆ ಹರಿದು ಬರುತ್ತಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT