ಹೊಸಪೇಟೆ: ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಶುಕ್ರವಾರ ನಾಲ್ವರುಸಚಿವರು ಹಂಪಿಗೆ ಬಂದು ಇಲ್ಲಿನ ಪವಿತ್ರ ಮಣ್ಣು ಕೊಂಡೊಯ್ದರು.
ಹಂಪಿ ವಿರೂಪಾಕ್ಷೇಶ್ವರ, ಭುವನೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದ ಸಚಿವರು, ಬಳಿಕ ಮಣ್ಣು ಸಂಗ್ರಹಿಸಿದರು. ನಾಡಪ್ರಭು ಕೆಂಪೇಗೌಡ, ಶ್ರೀ ಕೃಷ್ಣದೇವರಾಯನ ಹೆಸರಲ್ಲಿ ಅರ್ಚನೆ ಮಾಡಿಸಿದರು. ಆರತಿ ತಟ್ಟೆಗೆ ಎಲ್ಲರೂ ತಲಾ ₹500 ಹಾಕಿದರು.
ಹಂಪಿ ಪುಷ್ಕರಣಿಗಳಿಂದ ಒಂಬತ್ತು ಹಿತ್ತಾಳೆಯಬಿಂದಿಗೆಗಳಲ್ಲಿ ಸಂಗ್ರಹಿಸಿದ ಮಣ್ಣಿಗೆ ಪೂಜೆನೆರವೇರಿಸಿದರು.
ಇದಕ್ಕೂ ಮುನ್ನ ಸಚಿವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬಿಜೆಪಿ ಮುಖಂಡರು ಸ್ವಾಗತಿಸಿದರು. ಅಲ್ಲಿಂದ ಹಂಪಿ ವರೆಗೆ ಬೈಕ್ ಜಾಥಾ ನಡೆಸಿದರು. ಅಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಸಚಿವರು ವಿರೂಪಾಕ್ಷ ದೇಗುಲದ ವರೆಗೆ ಹೆಜ್ಜೆ ಹಾಕಿದರು.