<p><strong>ಹೊಸಪೇಟೆ (ವಿಜಯನಗರ):</strong> ರೈತರು ಬೆಳೆಯುವ ಬೆಳೆಗೆ ನಿಜವಾಗಿ ತಗಲುವ ವೆಚ್ಚಕ್ಕೆ ಶೇ 50ರಷ್ಟು ಮೊತ್ತವನ್ನು ಸೇರಿಸಿ (ಸಿ2+50) ಬೆಂಬಲ ಬೆಲೆ ನಿಗದಿಪಡಿಸಬೇಕು ಎಂಬುದು ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರ ಸೂತ್ರವಾಗಿತ್ತು, ಅದರಂತೆ ನಡೆದುಕೊಂಡರೆ ಯಾವ ಸಮಸ್ಯೆಯೂ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.</p><p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿನಾಥನ್ ಅವರು ಹಲವು ವರ್ಷ ದೇಶದಾದ್ಯಂತ ಸುತ್ತಾಡಿ ತಮ್ಮ ವರದಿ ಸಿದ್ಧಪಡಿಸಿದ್ದರು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ವರದಿಯನ್ನು ಉದ್ದೇಶಪೂರ್ವಕವಾಗಿ ಹಳ್ಳ ಹಿಡಿಸಿವೆ ಹಾಗೂ ಕಣ್ಣೊರೆಸುವ ತಂತ್ರವಾಗಿ ಬೆಲೆ ನಿಗದಿಪಡಿಸಿ ರೈತರಿಗೆ ಅದರ ಪ್ರಯೋಜನ ಸಿಗದಂತೆ ಮಾಡುತ್ತಿವೆ ಎಂದರು.</p><p>’ಏಳನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಒಮ್ಮೆಲೇ ₹85 ಸಾವಿರ ಕೋಟಿಯನ್ನು ಸರ್ಕಾರಿ ನೌಕರರ ಸಂಬಳಕ್ಕೆಂದು ಒದಗಿಸಿತು. ಇದಕ್ಕೆ ನನ್ನ ಆಕ್ಷೇಪ ಇಲ್ಲ, ಆದರೆ ಕೃಷಿಕರ ವಿಚಾರದಲ್ಲಿ ಮಾತ್ರ ಸರ್ಕಾರ ಒಂದಿಷ್ಟು ಉದಾರವಾಗಿ ನಡೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ರೈತರ ಎಲ್ಲಾ ಬೆಳೆಗಳಿಗೂ ಬೆಂಬಲ ಬೆಲೆ ಸಿಗಬೇಕಾದರೆ ₹10 ಸಾವಿರ ಕೋಟಿಯ ಆವರ್ತ ನಿಧಿಯನ್ನು ತಕ್ಷಣ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.</p><p>ಮಧ್ಯವರ್ತಿಗಳ ದಂಧೆ ಮೀರಿ ನಿಲ್ಲಬೇಕಾದರೆ ವರ್ಷವಿಡೀ ಬೆಂಬಲ ಬೆಲೆಯಲ್ಲಿ ರೈತರ ವಿವಿಧ ಬೆಳೆಗಳನ್ನು ಖರೀದಿಸುವ ವ್ಯವಸ್ಥೆ ಮಾಡಬೇಕು ಎಂದರು.</p><p>ರೈತರಿಗೆ ಅಧಿಕಾರ: ಮುಂದಿನ ದಿನಗಳಲ್ಲಿ ರೈತರು ರಾಜಕೀಯವಾಗಿ ಬೆಳವಣಿಗೆ ಕಾಣಬೇಕಿದ್ದು, ರೈತರದ್ದೇ ಪಕ್ಷ ಸ್ಥಾಪನೆಯ ಕುರಿತಂತೆ ಪ್ರಯತ್ನಗಳು ಆರಂಭವಾಗಿವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.</p><p>ರೈತ ಮುಖಂಡ ಖಾಜಾ ಹುಸೇನ್ ನಿಯಾಜಿ ಮಾತನಾಡಿ, ಸರ್ಕಾರಗಳು ರೈತರನ್ನು ಒಡೆದು ಆಳುವ ಹಾದಿ ತುಳಿಯುತ್ತಿವೆ, ಹೀಗಾಗಿಯೇ ರೈತರಲ್ಲಿ ಒಗ್ಗಟ್ಟು ಮೂಡದೆ ಅವರ ಹೋರಾಟಗಳೂ ವ್ಯರ್ಥವಾಗುತ್ತಿವೆ ಎಂದರು.</p><p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಮುಖಂಡರಾದ ಆರ್.ಎಲ್.ತಾಯಪ್ಪ, ಹನುಮಂತಪ್ಪ ಹೊಳೆಯಾಚಿ, ಜಡಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ರೈತರು ಬೆಳೆಯುವ ಬೆಳೆಗೆ ನಿಜವಾಗಿ ತಗಲುವ ವೆಚ್ಚಕ್ಕೆ ಶೇ 50ರಷ್ಟು ಮೊತ್ತವನ್ನು ಸೇರಿಸಿ (ಸಿ2+50) ಬೆಂಬಲ ಬೆಲೆ ನಿಗದಿಪಡಿಸಬೇಕು ಎಂಬುದು ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರ ಸೂತ್ರವಾಗಿತ್ತು, ಅದರಂತೆ ನಡೆದುಕೊಂಡರೆ ಯಾವ ಸಮಸ್ಯೆಯೂ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.</p><p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿನಾಥನ್ ಅವರು ಹಲವು ವರ್ಷ ದೇಶದಾದ್ಯಂತ ಸುತ್ತಾಡಿ ತಮ್ಮ ವರದಿ ಸಿದ್ಧಪಡಿಸಿದ್ದರು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ವರದಿಯನ್ನು ಉದ್ದೇಶಪೂರ್ವಕವಾಗಿ ಹಳ್ಳ ಹಿಡಿಸಿವೆ ಹಾಗೂ ಕಣ್ಣೊರೆಸುವ ತಂತ್ರವಾಗಿ ಬೆಲೆ ನಿಗದಿಪಡಿಸಿ ರೈತರಿಗೆ ಅದರ ಪ್ರಯೋಜನ ಸಿಗದಂತೆ ಮಾಡುತ್ತಿವೆ ಎಂದರು.</p><p>’ಏಳನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಒಮ್ಮೆಲೇ ₹85 ಸಾವಿರ ಕೋಟಿಯನ್ನು ಸರ್ಕಾರಿ ನೌಕರರ ಸಂಬಳಕ್ಕೆಂದು ಒದಗಿಸಿತು. ಇದಕ್ಕೆ ನನ್ನ ಆಕ್ಷೇಪ ಇಲ್ಲ, ಆದರೆ ಕೃಷಿಕರ ವಿಚಾರದಲ್ಲಿ ಮಾತ್ರ ಸರ್ಕಾರ ಒಂದಿಷ್ಟು ಉದಾರವಾಗಿ ನಡೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ರೈತರ ಎಲ್ಲಾ ಬೆಳೆಗಳಿಗೂ ಬೆಂಬಲ ಬೆಲೆ ಸಿಗಬೇಕಾದರೆ ₹10 ಸಾವಿರ ಕೋಟಿಯ ಆವರ್ತ ನಿಧಿಯನ್ನು ತಕ್ಷಣ ಸ್ಥಾಪಿಸಬೇಕು’ ಎಂದು ಅವರು ಒತ್ತಾಯಿಸಿದರು.</p><p>ಮಧ್ಯವರ್ತಿಗಳ ದಂಧೆ ಮೀರಿ ನಿಲ್ಲಬೇಕಾದರೆ ವರ್ಷವಿಡೀ ಬೆಂಬಲ ಬೆಲೆಯಲ್ಲಿ ರೈತರ ವಿವಿಧ ಬೆಳೆಗಳನ್ನು ಖರೀದಿಸುವ ವ್ಯವಸ್ಥೆ ಮಾಡಬೇಕು ಎಂದರು.</p><p>ರೈತರಿಗೆ ಅಧಿಕಾರ: ಮುಂದಿನ ದಿನಗಳಲ್ಲಿ ರೈತರು ರಾಜಕೀಯವಾಗಿ ಬೆಳವಣಿಗೆ ಕಾಣಬೇಕಿದ್ದು, ರೈತರದ್ದೇ ಪಕ್ಷ ಸ್ಥಾಪನೆಯ ಕುರಿತಂತೆ ಪ್ರಯತ್ನಗಳು ಆರಂಭವಾಗಿವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.</p><p>ರೈತ ಮುಖಂಡ ಖಾಜಾ ಹುಸೇನ್ ನಿಯಾಜಿ ಮಾತನಾಡಿ, ಸರ್ಕಾರಗಳು ರೈತರನ್ನು ಒಡೆದು ಆಳುವ ಹಾದಿ ತುಳಿಯುತ್ತಿವೆ, ಹೀಗಾಗಿಯೇ ರೈತರಲ್ಲಿ ಒಗ್ಗಟ್ಟು ಮೂಡದೆ ಅವರ ಹೋರಾಟಗಳೂ ವ್ಯರ್ಥವಾಗುತ್ತಿವೆ ಎಂದರು.</p><p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಮುಖಂಡರಾದ ಆರ್.ಎಲ್.ತಾಯಪ್ಪ, ಹನುಮಂತಪ್ಪ ಹೊಳೆಯಾಚಿ, ಜಡಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>