ರಥೋತ್ಸವ ಕಾರ್ತಿಕೋತ್ಸವಗಳು ಹಾಗೂ ಅಮವಾಸ್ಯೆ ಸಂದರ್ಭಗಳಲ್ಲಿ ಆಗಮಿಸುವ ಭಕ್ತರಿಗೆ ಇನ್ನೂ ಹೆಚ್ಚಿನ ಯಾತ್ರಿ ನಿವಾಸಗಳು ಹಾಗೂ ಮೂಲ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಲು ಮುಂದಾದಲ್ಲಿ ಭಕ್ತ ಸಮೂಹಕ್ಕೆ ಅನುಕೂಲವಾಗುತ್ತದೆ. ಸರ್ಕಾರ ಕೆಲವೊಂದು ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ಪ್ರಾಧಿಕಾರ ರಚಿಸಿದಂತೆ ಕೊಟ್ಟೂರಿಗೂ ಅಂತಹದೊಂದು ಪ್ರಾಧಿಕಾರ ರಚಿಸಿ ಅನುದಾನವನ್ನು ಮಂಜೂರು ಮಾಡಿದಲ್ಲಿ ಶ್ರೀಕ್ಷೇತ್ರ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಭಕ್ತರಾದ ರಾಣಿಬೆನ್ನೂರಿನ ಬಸವರಾಜಪ್ಪನವರ ಹೇಳಿದರು.