<p><strong>ಕೊಟ್ಟೂರು</strong>: ‘ರಕ್ತ ದಾನ ಮಾಡುವುದರಿಂದ ಮತ್ತೊಬ್ಬರ ಪ್ರಾಣ ಉಳಿಸಲು ಸಾಧ್ಯವಾಗುತ್ತದೆ’ ಎಂದು ಪತಂಜಲಿ ಯೋಗ ಸಮಿತಿಯ ಮುಖ್ಯಸ್ಥ ರಾಜೇಶ್ ಕಾರ್ವ ಹೇಳಿದರು.</p>.<p>ಪಟ್ಟಣದ ಬಸ್ನಿಲ್ದಾಣ ಹತ್ತಿರದ ನಾಗರಾಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಸಿರು ಹೊನಲು ಸೇವಾ ಸಂಸ್ಥೆ ಹಾಗೂ ವಿವೇಕಾನಂದ ರಕ್ತ ಭಂಡಾರದ ಸಹಯೋಗದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ರಕ್ತದಾನದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ. ಹೊಸ ರಕ್ತ ಉತ್ಪಾದನೆ ಆಗುತ್ತದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು’ ಎಂದರು.</p>.<p>ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಹಸಿರು ಹೊನಲು ತಂಡದ ಗೌರವಾಧ್ಯಕ್ಷ ಸಿ. ಬಸವರಾಜ್, ಅಧ್ಯಕ್ಷ ಎಸ್. ಗುರುರಾಜ್, ಉಪಾಧ್ಯಕ್ಷ ಬಿ.ಆರ್. ವಿಕ್ರಂ, ಕಾರ್ಯದರ್ಶಿ ಅಜಯ್, ಖಜಾಂಚಿ ದೇವರಮನಿ ಸಿದ್ದೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-1873559617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ‘ರಕ್ತ ದಾನ ಮಾಡುವುದರಿಂದ ಮತ್ತೊಬ್ಬರ ಪ್ರಾಣ ಉಳಿಸಲು ಸಾಧ್ಯವಾಗುತ್ತದೆ’ ಎಂದು ಪತಂಜಲಿ ಯೋಗ ಸಮಿತಿಯ ಮುಖ್ಯಸ್ಥ ರಾಜೇಶ್ ಕಾರ್ವ ಹೇಳಿದರು.</p>.<p>ಪಟ್ಟಣದ ಬಸ್ನಿಲ್ದಾಣ ಹತ್ತಿರದ ನಾಗರಾಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಸಿರು ಹೊನಲು ಸೇವಾ ಸಂಸ್ಥೆ ಹಾಗೂ ವಿವೇಕಾನಂದ ರಕ್ತ ಭಂಡಾರದ ಸಹಯೋಗದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ರಕ್ತದಾನದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ. ಹೊಸ ರಕ್ತ ಉತ್ಪಾದನೆ ಆಗುತ್ತದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು’ ಎಂದರು.</p>.<p>ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಹಸಿರು ಹೊನಲು ತಂಡದ ಗೌರವಾಧ್ಯಕ್ಷ ಸಿ. ಬಸವರಾಜ್, ಅಧ್ಯಕ್ಷ ಎಸ್. ಗುರುರಾಜ್, ಉಪಾಧ್ಯಕ್ಷ ಬಿ.ಆರ್. ವಿಕ್ರಂ, ಕಾರ್ಯದರ್ಶಿ ಅಜಯ್, ಖಜಾಂಚಿ ದೇವರಮನಿ ಸಿದ್ದೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-25-1873559617</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>