<p>ಕೊಟ್ಟೂರು: ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖಾಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕಾಧ್ಯಕ್ಷ ಅನಿಲ್ ಹೊಸಮನೆ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಲಭಿಸುವಂತೆ ಕಾರ್ಯೋನ್ಮುಖರಾಗಬೇಕು’ ಎಂದು ಸೂಚಿಸಿದರಲ್ಲದೇ ತಮ್ಮ ಅಧೀನಾಧಿಕಾರಿಗಳನ್ನು ಸಭೆಗೆ ಕಳುಹಿಸುವ ಇಲಾಖಾ ಮುಖ್ಯಸ್ಥರ ವಿರುದ್ಧ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಅನುಷ್ಠಾನ ಸಮಿತಿ ಸದಸ್ಯ ಪಿ. ಪ್ರಭುದೇವ್ ಮಾತನಾಡಿ, ‘ಪಟ್ಟಣದಲ್ಲಿ ಬಸ್ ಡಿಪೊ ಅವಶ್ಯಕವಾಗಿದ್ದು ಸಾರಿಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇಲಾಖಾಧಿಕಾರಿಗೆ ಸೂಚಿಸಿದರು. ಸಭೆಗೆ ಅಧಿಕಾರಿಗಳು ಗೈರು ಹಾಜರಾದರೆ ನಿರ್ಣಯ ಕೈಗೊಳ್ಳುವುದು ಹೇಗೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಮಿತಿ ಸದಸ್ಯ ಎಂ.ಎಂ. ಉಮಾಪತಿ ಗೃಹಲಕ್ಷ್ಮಿ ಇಲಾಖೆಗೆ ಸಂಬಂಧಿಸಿದ ಕೆಲವು ಮಾಹಿತಿಗಳನ್ನು ಕೇಳಿದಾಗ ನಿಖರ ಅಂಕಿ ಅಂಶಗಳೊಂದಿಗೆ ಉತ್ತರ ನೀಡದ ಇಲಾಖಾಧಿಕಾರಿ ವಿರುದ್ಧ ಅಧ್ಯಕ್ಷರು ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಮುಂದಿನ ಸಭೆಗೆ ನಿಖರ ಮಾಹಿತಿಯೊಂದಿಗೆ ಬರಬೇಕೆಂದು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಸಮಿತಿ ಸದಸ್ಯರಾದ ಎನ್.ಚಂದ್ರಪ್ಪ, ಮಾರಪ್ಪ,ಸುಶೀಲಮ್ಮ, ಎ.ಎಸ್. ಗಾಯಿತ್ರಿ,ಟಿ.ಶಿವರಾಜ್, ಟಿ.ನಾಗಪ್ಪ, ಪಿ.ಕೆ.ಇಂದ್ರಜಿತ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-25-346152462</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ಪ್ರಗತಿ ಪರಿಶೀಲನಾ ಸಭೆಗಳಿಗೆ ಇಲಾಖಾಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕಾಧ್ಯಕ್ಷ ಅನಿಲ್ ಹೊಸಮನೆ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಲಭಿಸುವಂತೆ ಕಾರ್ಯೋನ್ಮುಖರಾಗಬೇಕು’ ಎಂದು ಸೂಚಿಸಿದರಲ್ಲದೇ ತಮ್ಮ ಅಧೀನಾಧಿಕಾರಿಗಳನ್ನು ಸಭೆಗೆ ಕಳುಹಿಸುವ ಇಲಾಖಾ ಮುಖ್ಯಸ್ಥರ ವಿರುದ್ಧ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ಅನುಷ್ಠಾನ ಸಮಿತಿ ಸದಸ್ಯ ಪಿ. ಪ್ರಭುದೇವ್ ಮಾತನಾಡಿ, ‘ಪಟ್ಟಣದಲ್ಲಿ ಬಸ್ ಡಿಪೊ ಅವಶ್ಯಕವಾಗಿದ್ದು ಸಾರಿಗೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇಲಾಖಾಧಿಕಾರಿಗೆ ಸೂಚಿಸಿದರು. ಸಭೆಗೆ ಅಧಿಕಾರಿಗಳು ಗೈರು ಹಾಜರಾದರೆ ನಿರ್ಣಯ ಕೈಗೊಳ್ಳುವುದು ಹೇಗೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಮಿತಿ ಸದಸ್ಯ ಎಂ.ಎಂ. ಉಮಾಪತಿ ಗೃಹಲಕ್ಷ್ಮಿ ಇಲಾಖೆಗೆ ಸಂಬಂಧಿಸಿದ ಕೆಲವು ಮಾಹಿತಿಗಳನ್ನು ಕೇಳಿದಾಗ ನಿಖರ ಅಂಕಿ ಅಂಶಗಳೊಂದಿಗೆ ಉತ್ತರ ನೀಡದ ಇಲಾಖಾಧಿಕಾರಿ ವಿರುದ್ಧ ಅಧ್ಯಕ್ಷರು ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಮುಂದಿನ ಸಭೆಗೆ ನಿಖರ ಮಾಹಿತಿಯೊಂದಿಗೆ ಬರಬೇಕೆಂದು ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ್, ಸಮಿತಿ ಸದಸ್ಯರಾದ ಎನ್.ಚಂದ್ರಪ್ಪ, ಮಾರಪ್ಪ,ಸುಶೀಲಮ್ಮ, ಎ.ಎಸ್. ಗಾಯಿತ್ರಿ,ಟಿ.ಶಿವರಾಜ್, ಟಿ.ನಾಗಪ್ಪ, ಪಿ.ಕೆ.ಇಂದ್ರಜಿತ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-25-346152462</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>