ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಮಹಿಳೆಯೊಂದಿಗೆ ಅಸಭ್ಯ ಮಾತು, ಹೆಡ್‌ ಕಾನ್‌ಸ್ಟೆಬಲ್‌ ಅಮಾನತು

Last Updated 22 ಸೆಪ್ಟೆಂಬರ್ 2022, 16:16 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮಹಿಳೆಯೊಂದಿಗೆ ಮೊಬೈಲ್‌ನಲ್ಲಿ ಅಸಭ್ಯವಾಗಿ ಮಾತನಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಟ್ಟೂರು ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಾರಪ್ಪ ಎಂಬುವರನ್ನು ಗುರುವಾರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆ ಬೆನ್ನಲ್ಲೇ ಮಾರಪ್ಪ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಆದೇಶ ಹೊರಡಿಸಿದ್ದಾರೆ.

‘ದೂರುದಾರ ಮಹಿಳೆಯು ಹಣದ ವಿಚಾರವಾಗಿ ಚಿಕ್ಕಪ್ಪನ ಮಗಳ ಜೊತೆ ಜಗಳವಾಡಿದ್ದಾರೆ. ಈ ಕುರಿತು ಸೆ. 18ರಂದು ಠಾಣೆಗೆ ದೂರು ಕೊಡಲು ಬಂದಿದ್ದರು. ಮಾರಪ್ಪ ದೂರು ಸ್ವೀಕರಿಸಿ, ‘ನಾಳೆ ಬನ್ನಿ ಎಲ್ಲರನ್ನೂ ಕರೆದು ವಿಚಾರಿಸುತ್ತೇನೆ’ ಎಂದು ಹೇಳಿ ಕಳಿಸಿದ್ದಾರೆ. ಸೆ. 21ರಂದು ಮಾರಪ್ಪ ಮಹಿಳೆಗೆ ಕರೆ ಮಾಡಿ, ಲೈಂಗಿಕ ಸಮ್ಮತಿಗೆ ಒತ್ತಾಯ ಮಾಡಿದ್ದಾರೆ. ಮಹಿಳೆ ದೂರು ಆಧರಿಸಿ ಮಾರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೇವೆಯಿಂದಲೂ ಅಮಾನತುಗೊಳಿಸಲಾಗಿದೆ’ ಎಂದು ಎಸ್ಪಿ ಡಾ. ಅರುಣ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT