<p>ಕೊಟ್ಟೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ ಬೆಂಬಲ ಬೆಲೆ ಅಡಿಯಲ್ಲಿ ಎರಡನೇ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗುವುದು ಎಂದು ಜಿಲ್ಲಾ ಆಹಾರ ಇಲಾಖೆ ಉಪ ನಿರ್ದೇಶಕ ಡಿ.ರಿಯಾಜ್ ಹೇಳಿದರು.</p>.<p>ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ತೂಕ ಪರಿಶೀಲಿಸಿ ಅವರ ಮಾತನಾಡಿದರು.</p>.<p>ಎಪಿಎಂಸಿ ಅಧ್ಯಕ್ಷ ಹರಾಳು ನಂಜಪ್ಪ ಮಾತನಾಡಿ, ‘ರೈತರು ಟ್ರ್ಯಾಕ್ಟರ್ನಲ್ಲಿ ರಾಗಿ ತಂದು ನಾಲ್ಕೈದು ದಿನ ಹಗಲು ರಾತ್ರಿ ತಮ್ಮ ಸರದಿ ಬರುವ ತನಕ ಕಾದು ಮಾರಾಟ ಮಾಡಬೇಕಾದ ಅನಿವಾರ್ಯ ಇದೆ’ ಎಂದು ಗಮನಕ್ಕೆ ತಂದರು.</p>.<p>ಇದಕ್ಕೆ ಸ್ಪಂದಿಸಿದ ಉಪ ನಿರ್ದೇಶಕ ರಿಯಾಜ್, ‘ಶುಕ್ರವಾರವಾರದಿಂದಲೇ ಎಪಿಎಂಸಿಯಲ್ಲಿ ಮತ್ತೊಂದು ರಾಗಿ ಖರೀದಿ ಕೇಂದ್ರ ತೆರೆಯಲಾಗುವುದು. ತಾಲ್ಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಸಹ ರಾಗಿ ಖರೀದಿ ಕೇಂದ್ರ ಆರಂಭಿಸುವಂತೆ ಮನವಿ ಬಂದಿದ್ದರಿಂದ ಅಲ್ಲಿ ಆರಂಭಿಸಲಾಗಿದೆ’ ಎಂದರು.</p>.<p>‘ಮುಂದಿನ ವರ್ಷ ಕೊಟ್ಟೂರು ತಾಲ್ಲೂಕಿನ 14 ಸಹಕಾರ ಸೊಸೈಟಿಯಲ್ಲಿಯೂ ರಾಗಿ ಖರೀದಿ ಕೇಂದ್ರ ಆರಂಭಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದರು.</p>.<p>‘ಕೊಟ್ಟೂರಿನಲ್ಲಿ ರಾಗಿ ಬೆಂಬಲ ಬೆಲೆಗೆ ಮಾರಾಟ ಮಾಡಲು 2,761 ರೈತರು ನೋಂದಣೆ ಮಾಡಿದ್ದು, ಇದರಲ್ಲಿ ಶೇ 50ರಷ್ಟು ರೈತರ ರಾಗಿ ಖರೀದಿಸಲಾಗಿದೆ. ಉಜ್ಜಯಿನಿಯಲ್ಲಿ 941 ರೈತರು ನೋಂದಣಿ ಮಾಡಿದ್ದಾರೆ’ ಎಂದರು.</p>.<p>ಎಪಿಎಂಸಿ ಉಪಾಧ್ಯಕ್ಷ ಎಂ. ಶಿವಣ್ಣ, ಕಾರ್ಯದರ್ಶಿ ವೀರಣ್ಣ, ಹ್ಯಾಳ್ಯಾ ಕೊಟ್ರೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-25-376761604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ ಬೆಂಬಲ ಬೆಲೆ ಅಡಿಯಲ್ಲಿ ಎರಡನೇ ರಾಗಿ ಖರೀದಿ ಕೇಂದ್ರವನ್ನು ತೆರೆಯಲಾಗುವುದು ಎಂದು ಜಿಲ್ಲಾ ಆಹಾರ ಇಲಾಖೆ ಉಪ ನಿರ್ದೇಶಕ ಡಿ.ರಿಯಾಜ್ ಹೇಳಿದರು.</p>.<p>ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ, ತೂಕ ಪರಿಶೀಲಿಸಿ ಅವರ ಮಾತನಾಡಿದರು.</p>.<p>ಎಪಿಎಂಸಿ ಅಧ್ಯಕ್ಷ ಹರಾಳು ನಂಜಪ್ಪ ಮಾತನಾಡಿ, ‘ರೈತರು ಟ್ರ್ಯಾಕ್ಟರ್ನಲ್ಲಿ ರಾಗಿ ತಂದು ನಾಲ್ಕೈದು ದಿನ ಹಗಲು ರಾತ್ರಿ ತಮ್ಮ ಸರದಿ ಬರುವ ತನಕ ಕಾದು ಮಾರಾಟ ಮಾಡಬೇಕಾದ ಅನಿವಾರ್ಯ ಇದೆ’ ಎಂದು ಗಮನಕ್ಕೆ ತಂದರು.</p>.<p>ಇದಕ್ಕೆ ಸ್ಪಂದಿಸಿದ ಉಪ ನಿರ್ದೇಶಕ ರಿಯಾಜ್, ‘ಶುಕ್ರವಾರವಾರದಿಂದಲೇ ಎಪಿಎಂಸಿಯಲ್ಲಿ ಮತ್ತೊಂದು ರಾಗಿ ಖರೀದಿ ಕೇಂದ್ರ ತೆರೆಯಲಾಗುವುದು. ತಾಲ್ಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಸಹ ರಾಗಿ ಖರೀದಿ ಕೇಂದ್ರ ಆರಂಭಿಸುವಂತೆ ಮನವಿ ಬಂದಿದ್ದರಿಂದ ಅಲ್ಲಿ ಆರಂಭಿಸಲಾಗಿದೆ’ ಎಂದರು.</p>.<p>‘ಮುಂದಿನ ವರ್ಷ ಕೊಟ್ಟೂರು ತಾಲ್ಲೂಕಿನ 14 ಸಹಕಾರ ಸೊಸೈಟಿಯಲ್ಲಿಯೂ ರಾಗಿ ಖರೀದಿ ಕೇಂದ್ರ ಆರಂಭಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದರು.</p>.<p>‘ಕೊಟ್ಟೂರಿನಲ್ಲಿ ರಾಗಿ ಬೆಂಬಲ ಬೆಲೆಗೆ ಮಾರಾಟ ಮಾಡಲು 2,761 ರೈತರು ನೋಂದಣೆ ಮಾಡಿದ್ದು, ಇದರಲ್ಲಿ ಶೇ 50ರಷ್ಟು ರೈತರ ರಾಗಿ ಖರೀದಿಸಲಾಗಿದೆ. ಉಜ್ಜಯಿನಿಯಲ್ಲಿ 941 ರೈತರು ನೋಂದಣಿ ಮಾಡಿದ್ದಾರೆ’ ಎಂದರು.</p>.<p>ಎಪಿಎಂಸಿ ಉಪಾಧ್ಯಕ್ಷ ಎಂ. ಶಿವಣ್ಣ, ಕಾರ್ಯದರ್ಶಿ ವೀರಣ್ಣ, ಹ್ಯಾಳ್ಯಾ ಕೊಟ್ರೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-25-376761604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>