<p><strong>ಕೊಟ್ಟೂರು</strong>: ಜನತೆಗೆ ಎಲ್ಲಾ ಭಾಗ್ಯಗಳನ್ನು ನೀಡುತ್ತಿರುವ ಸರ್ಕಾರ ತಾಲ್ಲೂಕಿ ನಾದ್ಯಂತ ಬಹುತೇಕ ರಸ್ತೆಗಳಿಗೆ ದುರಸ್ತಿ ಭಾಗ್ಯ ಕರುಣಿಸಿಲ್ಲ. ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿರುವ ತಗ್ಗು ಗುಂಡಿಗಳ ಮಧ್ಯೆ ರಸ್ತೆಯ ಜಾಡನ್ನು ಹುಡುಕುತ್ತಾ ಚಾಲಕರು ವಾಹನ ಚಲಾಯಿಸುವಂತಹ ಪರಿಸ್ಥಿತಿ ಕಾಣಬಹುದಾಗಿದೆ.</p><p>ಈಚೆಗೆ ಕೆಲವು ರಸ್ತೆಗಳು ದುರಸ್ತಿ ಭಾಗ್ಯ ಕಂಡರೂ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಬಿಲ್ಲಿನ ಮೊತ್ತ ಪಾವತಿಸುವುದಕ್ಕೂ ಮೊದಲೇ ತಗ್ಗು ಗುಂಡಿಗಳು ಪ್ರತ್ಯಕ್ಷವಾಗಿ ಕಳಪೆ ಕಾಮಗಾರಿಗೆ ಸಾಕ್ಷಿಯಾಗಿರುವುದು ಕಾಣಬಹುದಾಗಿದೆ.</p><p>ಗಡಿ ಗ್ರಾಮವಾಗಿರುವ ಹಗರಿಗಜಾಪುರ ಗ್ರಾಮ ಹರಪನಹಳ್ಳಿ ತಾಲ್ಲೂಕಿನ ವ್ಯಾಪ್ತಿಗೊಳಪಟ್ಟಿದ್ದರೂ ಕೊಟ್ಟೂರಿನಿಂದ ಏಳು ಕಿ.ಮೀ. ಸಮೀಪದಲ್ಲಿರುವುದರಿಂದ ಕಚೇರಿ ಕೆಲಸ ಕಾರ್ಯಗಳಿಗೆ ಹರಪನಹಳ್ಳಿ ಹಾಗೂ ವ್ಯಾಪಾರ ವಹಿವಾಟು ಹಾಗೂ ಶಾಲಾ ಕಾಲೇಜುಗಳಿಗೆ ಗ್ರಾಮಸ್ಥರು ಕೊಟ್ಟೂರನ್ನು ಅವಲಂಬಿಸಿದ್ದಾರೆ.</p><p>ಹಗರಿಗಜಾಪುರ ಗ್ರಾಮದಿಂದ ಹರಪನಹಳ್ಳಿ ಕ್ಷೇತ್ರಕ್ಕೆ ಒಳಪಡುವ ಮೂರು ಕಿ.ಮೀ. ರಸ್ತೆ ನಿರ್ಮಾಣವಾಗಿದ್ದು ಬಿಟ್ಟರೆ ಕೊಟ್ಟೂರು ತಾಲ್ಲೂಕಿನ ವ್ಯಾಪ್ತಿಗೊಳಪಡುವ ಉಳಿದ ನಾಲ್ಕು ಕಿ.ಮೀ. ರಸ್ತೆ ಇಂದಿಗೂ ದುರಸ್ತಿ ಭಾಗ್ಯ ಕಾಣದಿರುವುದರಿಂದ ಹಗರಿಗಜಾಪುರ ಹಾಗೂ ಈ ರಸ್ತೆಗೆ ತಾಗಿಕೊಂಡಿರುವ ಗೌರಿಪುರ, ಬಸವನಾಳು, ಕೆಸರಹಳ್ಳಿ, ಬಳಗಾನೂರು ಮುಂತಾದ ಗ್ರಾಮಗಳ ಜನರು ಸಂಚರಿಸುವಾಗ ತೊಂದರೆಯಾಗಿದೆ.</p><p>’ರಸ್ತೆಗಳ ದುಸ್ಥಿತಿಯಿಂದ ನಿತ್ಯ ಅಪಘಾತಗಳು ನಡೆಯುತ್ತಿವೆ. ಸಕಾಲಕ್ಕೆ ಶಾಲಾ ಕಾಲೇಜುಗಳಿಗೆ ಹಾಗೂ ಕಚೇರಿಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರಾದ ಜಿ.ಎಸ್.ಎಂ.ಮಹಾಲಿಂಗಯ್ಯ, ಎಂ.ಎಂ.ರಾಜಯ್ಯ ಹಾಗೂ ಸಬರದ ನಾಗವೇಣಿ,ಅರಸಿಕೆರೆ ಶಿವಮ್ಮ ಅಸಮಾಧಾನ ವ್ಯಕ್ತಪಡಿಸಿದರು.</p><p>ಕೊಟ್ಟೂರು ಹಗರಿಗಜಾಪುರ ಮಾರ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು ಇದನ್ನು ಪ್ರಗತಿ ಪಥ ಯೋಜನೆಯಡಿ ರಸ್ತೆ ನಿರ್ಮಾಣ ಮಾಡಲು ಕ್ರಿಯಾಯೋಜನೆಯನ್ನು ಇಲಾಖಾ ಮೇಲಾಧಿಕಾರಿಗಳಿಗೆ ಸಲ್ಲಿಸಿ ದ್ದೇವೆ. ಶೀಘ್ರದಲ್ಲಿಯೇ ಕಾಮಗಾರಿ ಚಾಲನೆಗೊಳ್ಳಲಿದೆ ಎಂದು ಜಿ.ಪಂ.ಎಇಇ ಮಲ್ಲಿಕಾರ್ಜುನಸ್ವಾಮಿ ತಿಳಿಸಿದರು.</p><p>ತಾಲ್ಲೂಕಿನ ರಸ್ತೆಗಳ ಸ್ಥಿತಿ ಗತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ಇನ್ನಾದರೂ ರಸ್ತೆಗಳ ದುರಸ್ತಿಗೆ ಮುಂದಾಗಬೇಕೆಂಬುದು ಜನತೆಯ ಒತ್ತಾಸೆಯಾಗಿದೆ.</p>.<div><blockquote>ನಮ್ಮ ಕ್ಷೇತ್ರಕ್ಕೆ ಒಳಪಡುವ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ಗಮನವಿದ್ದು, ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆಕೆ.</blockquote><span class="attribution">ನೇಮರಾಜನಾಯ್ಕ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಜನತೆಗೆ ಎಲ್ಲಾ ಭಾಗ್ಯಗಳನ್ನು ನೀಡುತ್ತಿರುವ ಸರ್ಕಾರ ತಾಲ್ಲೂಕಿ ನಾದ್ಯಂತ ಬಹುತೇಕ ರಸ್ತೆಗಳಿಗೆ ದುರಸ್ತಿ ಭಾಗ್ಯ ಕರುಣಿಸಿಲ್ಲ. ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿರುವ ತಗ್ಗು ಗುಂಡಿಗಳ ಮಧ್ಯೆ ರಸ್ತೆಯ ಜಾಡನ್ನು ಹುಡುಕುತ್ತಾ ಚಾಲಕರು ವಾಹನ ಚಲಾಯಿಸುವಂತಹ ಪರಿಸ್ಥಿತಿ ಕಾಣಬಹುದಾಗಿದೆ.</p><p>ಈಚೆಗೆ ಕೆಲವು ರಸ್ತೆಗಳು ದುರಸ್ತಿ ಭಾಗ್ಯ ಕಂಡರೂ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಿಗೆ ಬಿಲ್ಲಿನ ಮೊತ್ತ ಪಾವತಿಸುವುದಕ್ಕೂ ಮೊದಲೇ ತಗ್ಗು ಗುಂಡಿಗಳು ಪ್ರತ್ಯಕ್ಷವಾಗಿ ಕಳಪೆ ಕಾಮಗಾರಿಗೆ ಸಾಕ್ಷಿಯಾಗಿರುವುದು ಕಾಣಬಹುದಾಗಿದೆ.</p><p>ಗಡಿ ಗ್ರಾಮವಾಗಿರುವ ಹಗರಿಗಜಾಪುರ ಗ್ರಾಮ ಹರಪನಹಳ್ಳಿ ತಾಲ್ಲೂಕಿನ ವ್ಯಾಪ್ತಿಗೊಳಪಟ್ಟಿದ್ದರೂ ಕೊಟ್ಟೂರಿನಿಂದ ಏಳು ಕಿ.ಮೀ. ಸಮೀಪದಲ್ಲಿರುವುದರಿಂದ ಕಚೇರಿ ಕೆಲಸ ಕಾರ್ಯಗಳಿಗೆ ಹರಪನಹಳ್ಳಿ ಹಾಗೂ ವ್ಯಾಪಾರ ವಹಿವಾಟು ಹಾಗೂ ಶಾಲಾ ಕಾಲೇಜುಗಳಿಗೆ ಗ್ರಾಮಸ್ಥರು ಕೊಟ್ಟೂರನ್ನು ಅವಲಂಬಿಸಿದ್ದಾರೆ.</p><p>ಹಗರಿಗಜಾಪುರ ಗ್ರಾಮದಿಂದ ಹರಪನಹಳ್ಳಿ ಕ್ಷೇತ್ರಕ್ಕೆ ಒಳಪಡುವ ಮೂರು ಕಿ.ಮೀ. ರಸ್ತೆ ನಿರ್ಮಾಣವಾಗಿದ್ದು ಬಿಟ್ಟರೆ ಕೊಟ್ಟೂರು ತಾಲ್ಲೂಕಿನ ವ್ಯಾಪ್ತಿಗೊಳಪಡುವ ಉಳಿದ ನಾಲ್ಕು ಕಿ.ಮೀ. ರಸ್ತೆ ಇಂದಿಗೂ ದುರಸ್ತಿ ಭಾಗ್ಯ ಕಾಣದಿರುವುದರಿಂದ ಹಗರಿಗಜಾಪುರ ಹಾಗೂ ಈ ರಸ್ತೆಗೆ ತಾಗಿಕೊಂಡಿರುವ ಗೌರಿಪುರ, ಬಸವನಾಳು, ಕೆಸರಹಳ್ಳಿ, ಬಳಗಾನೂರು ಮುಂತಾದ ಗ್ರಾಮಗಳ ಜನರು ಸಂಚರಿಸುವಾಗ ತೊಂದರೆಯಾಗಿದೆ.</p><p>’ರಸ್ತೆಗಳ ದುಸ್ಥಿತಿಯಿಂದ ನಿತ್ಯ ಅಪಘಾತಗಳು ನಡೆಯುತ್ತಿವೆ. ಸಕಾಲಕ್ಕೆ ಶಾಲಾ ಕಾಲೇಜುಗಳಿಗೆ ಹಾಗೂ ಕಚೇರಿಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರಾದ ಜಿ.ಎಸ್.ಎಂ.ಮಹಾಲಿಂಗಯ್ಯ, ಎಂ.ಎಂ.ರಾಜಯ್ಯ ಹಾಗೂ ಸಬರದ ನಾಗವೇಣಿ,ಅರಸಿಕೆರೆ ಶಿವಮ್ಮ ಅಸಮಾಧಾನ ವ್ಯಕ್ತಪಡಿಸಿದರು.</p><p>ಕೊಟ್ಟೂರು ಹಗರಿಗಜಾಪುರ ಮಾರ್ಗ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು ಇದನ್ನು ಪ್ರಗತಿ ಪಥ ಯೋಜನೆಯಡಿ ರಸ್ತೆ ನಿರ್ಮಾಣ ಮಾಡಲು ಕ್ರಿಯಾಯೋಜನೆಯನ್ನು ಇಲಾಖಾ ಮೇಲಾಧಿಕಾರಿಗಳಿಗೆ ಸಲ್ಲಿಸಿ ದ್ದೇವೆ. ಶೀಘ್ರದಲ್ಲಿಯೇ ಕಾಮಗಾರಿ ಚಾಲನೆಗೊಳ್ಳಲಿದೆ ಎಂದು ಜಿ.ಪಂ.ಎಇಇ ಮಲ್ಲಿಕಾರ್ಜುನಸ್ವಾಮಿ ತಿಳಿಸಿದರು.</p><p>ತಾಲ್ಲೂಕಿನ ರಸ್ತೆಗಳ ಸ್ಥಿತಿ ಗತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ಇನ್ನಾದರೂ ರಸ್ತೆಗಳ ದುರಸ್ತಿಗೆ ಮುಂದಾಗಬೇಕೆಂಬುದು ಜನತೆಯ ಒತ್ತಾಸೆಯಾಗಿದೆ.</p>.<div><blockquote>ನಮ್ಮ ಕ್ಷೇತ್ರಕ್ಕೆ ಒಳಪಡುವ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ಗಮನವಿದ್ದು, ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆಕೆ.</blockquote><span class="attribution">ನೇಮರಾಜನಾಯ್ಕ, ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>