<p><strong>ಹೊಸಪೇಟೆ (ವಿಜಯನಗರ): </strong>ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯವರ ದೌರ್ಜನ್ಯ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದವರು (ಕೆಪಿಆರ್ಎಸ್) ನಗರದ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p>ಅನೇಕ ದಶಕಗಳಿಂದ ರೈತರು ಸಾಗುವಳಿ ಮಾಡುತ್ತಿದ್ದಾರೆ. ಅಂತಹವರ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ. ಅವರಿಗೆ ರಕ್ಷಣೆ ಒದಗಿಸಬೇಕು. ಅರ್ಜಿ ಸಲ್ಲಿಸಿದ ರೈತರಿಗೆ ಹಕ್ಕುಪತ್ರಗಳನ್ನು ನೀಡಬೇಕು. ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿ ಒಕ್ಕಲೆಬ್ಬಿಸುವ ಪ್ರಯತ್ನ ಕೈಬಿಡಲು ಸರ್ಕಾರ ಗಂಭೀರವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್ಗೆ ಸಲ್ಲಿಸಿ ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ಎನ್. ಯಲ್ಲಾಲಿಂಗ, ಆರ್. ಭಾಸ್ಕರ್ ರೆಡ್ಡಿ, ಪ್ರಕಾಶ್, ಗೋಪಾಲ್ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯವರ ದೌರ್ಜನ್ಯ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದವರು (ಕೆಪಿಆರ್ಎಸ್) ನಗರದ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p>ಅನೇಕ ದಶಕಗಳಿಂದ ರೈತರು ಸಾಗುವಳಿ ಮಾಡುತ್ತಿದ್ದಾರೆ. ಅಂತಹವರ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ. ಅವರಿಗೆ ರಕ್ಷಣೆ ಒದಗಿಸಬೇಕು. ಅರ್ಜಿ ಸಲ್ಲಿಸಿದ ರೈತರಿಗೆ ಹಕ್ಕುಪತ್ರಗಳನ್ನು ನೀಡಬೇಕು. ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿ ಒಕ್ಕಲೆಬ್ಬಿಸುವ ಪ್ರಯತ್ನ ಕೈಬಿಡಲು ಸರ್ಕಾರ ಗಂಭೀರವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್ಗೆ ಸಲ್ಲಿಸಿ ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ಎನ್. ಯಲ್ಲಾಲಿಂಗ, ಆರ್. ಭಾಸ್ಕರ್ ರೆಡ್ಡಿ, ಪ್ರಕಾಶ್, ಗೋಪಾಲ್ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>