ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಗರ್‌ ಹುಕುಂ ಸಾಗುವಳಿದಾರರ ಮೇಲಿನ ದೌರ್ಜನ್ಯಕ್ಕೆ ವಿರೋಧ

Last Updated 31 ಮಾರ್ಚ್ 2023, 13:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯವರ ದೌರ್ಜನ್ಯ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದವರು (ಕೆಪಿಆರ್‌ಎಸ್‌) ನಗರದ ತಹಶೀಲ್ದಾರ್‌ ಕಚೇರಿ ಎದುರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಅನೇಕ ದಶಕಗಳಿಂದ ರೈತರು ಸಾಗುವಳಿ ಮಾಡುತ್ತಿದ್ದಾರೆ. ಅಂತಹವರ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ. ಅವರಿಗೆ ರಕ್ಷಣೆ ಒದಗಿಸಬೇಕು. ಅರ್ಜಿ ಸಲ್ಲಿಸಿದ ರೈತರಿಗೆ ಹಕ್ಕುಪತ್ರಗಳನ್ನು ನೀಡಬೇಕು. ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿ ಒಕ್ಕಲೆಬ್ಬಿಸುವ ಪ್ರಯತ್ನ ಕೈಬಿಡಲು ಸರ್ಕಾರ ಗಂಭೀರವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಮುಖ್ಯಮಂತ್ರಿಯವರ ಹೆಸರಿಗೆ ಬರೆದ ಮನವಿ ಪತ್ರ ತಹಶೀಲ್ದಾರ್‌ಗೆ ಸಲ್ಲಿಸಿ ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಎನ್‌. ಯಲ್ಲಾಲಿಂಗ, ಆರ್‌. ಭಾಸ್ಕರ್‌ ರೆಡ್ಡಿ, ಪ್ರಕಾಶ್‌, ಗೋಪಾಲ್‌ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT