ಗಾದಿಗನೂರು, ಕೊಟಗಿನಾಳ ಗ್ರಾಮದ ಬಡ ರೈತರು ನೂರಾರು ವರ್ಷಗಳಿಂದ ಭೂಮಿ ನಂಬಿ ಉಳುಮೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಈ ಜಮೀನು ಬಿಟ್ಟರೆ ಬೇರೆ ಗತಿಯೇ ಇಲ್ಲ. ಅಧಿಕಾರಿಗಳು ಸರಿಯಾದ ಮಾಹಿತಿ ಕೊಡದೆ ಗುತ್ತಿಗೆದಾರರ ಹೆಸರಿನಲ್ಲಿ ₹3 ಲಕ್ಷ, ₹ 5 ಲಕ್ಷ ಮುಂಗಡ ನೀಡಿ ಒಪ್ಪಂದ ಕರಾರು ಪತ್ರ ಮಾಡಿಕೊಂಡಿರುವುದು ಸರಿಯಲ್ಲ. ಕೊಟ್ಟ ಹಣ ವಾಪಸ್ ಪಡೆದು, ಕಾಮಗಾರಿ ಸ್ಥಗಿತಗೊಳಿಸಿ, ಪಕ್ಕದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಯೋಜಿನೆ ಕಾರ್ಯರೂಪಕ್ಕೆ ತರಬೇಕು ಎಂದು ಅವರು ಒತ್ತಾಯಿಸಿದರು.