<p>ಹೊಸಪೇಟೆ (ವಿಜಯನಗರ): ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ನಮ್ಮೂರಿನ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ಹಳೆ ಎಣಿಗಿ ಬಸಾಪುರ, ಹೊಸ ಎಣಿಗಿ ಬಸಾಪುರ ಮತ್ತು ಹಂಪಸಾಗರ-3 ಗ್ರಾಮಗಳಲ್ಲಿ ಶನಿವಾರ ವಿದ್ಯಾರ್ಥಿಗಳು ಮತ್ತು ಪೋಷಕರು ಒಕ್ಕೊರಲಿನಿಂದ ಎಚ್ಚರಿಸಿದರು.</p>.<p>ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ರವಿಕಿರಣ್ ಜೆ.ಪಿ. ಮಾತನಾಡಿ, 'ಈ ಊರಿನ ಶಾಲೆಯನ್ನು ಮುಚ್ಚಿದರೆ ಒಂದನೇ ತರಗತಿಯ ಚಿಕ್ಕ ಮಕ್ಕಳು ಮೂರು ಮತ್ತು ನಾಲ್ಕು ಕಿಲೋ ಮೀಟರ್ ಇರುವ ಹಂಪಸಾಗರ-2 ಶಾಲೆಗೆ ಹೋಗುವುದು ಬಹಳ ಕಷ್ಟ, ಹೀಗಾದರೆ ಮಕ್ಕಳು ಶಾಲೆಗೆ ಹೋಗುವುದನ್ನೇ ನಿಲ್ಲಿಸುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘140 ವಿದ್ಯಾರ್ಥಿಗಳು ಇರುವ ಹಂಪಸಾಗರ-3 ಶಾಲೆಯನ್ನು ಸಹ ಮುಚ್ಚಲಾಗುತ್ತಿದೆ. ಈಗಾಗಲೇ ಮುಚ್ಚುವ ಶಾಲೆಗಳ ಪಟ್ಟಿಯನ್ನು ಬಿಟ್ಟಿದ್ದಾರೆ. ನಮ್ಮ ಜಿಲ್ಲೆಯಲ್ಲಿಯೇ 738 ಶಾಲೆಗಳನ್ನು ಮುಚ್ಚಲಾಗುತ್ತಿದೆ, ಇದರ ಬಗ್ಗೆ ಪೋಷಕರು ಎಚ್ಚರದಿಂದ ಇರಬೇಕು’ ಎಂದರು.</p>.<p>ಸಂಘಟನೆಯ ಜಿಲ್ಲಾ ಸದಸ್ಯೆ ಉಮಾದೇವಿ, ಗ್ರಾಮಸ್ಥರಾದ ವಿನಾಯಕ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್, ಶ್ರೀನಿವಾಸ್, ಹನುಮಂತಪ್ಪ, ಕರಿಬಸಪ್ಪ, ನಾಗರಾಜ್, ನಿಂಗಪ್ಪ, ಕೃಷ್ಣಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ನಮ್ಮೂರಿನ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ಹಳೆ ಎಣಿಗಿ ಬಸಾಪುರ, ಹೊಸ ಎಣಿಗಿ ಬಸಾಪುರ ಮತ್ತು ಹಂಪಸಾಗರ-3 ಗ್ರಾಮಗಳಲ್ಲಿ ಶನಿವಾರ ವಿದ್ಯಾರ್ಥಿಗಳು ಮತ್ತು ಪೋಷಕರು ಒಕ್ಕೊರಲಿನಿಂದ ಎಚ್ಚರಿಸಿದರು.</p>.<p>ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ರವಿಕಿರಣ್ ಜೆ.ಪಿ. ಮಾತನಾಡಿ, 'ಈ ಊರಿನ ಶಾಲೆಯನ್ನು ಮುಚ್ಚಿದರೆ ಒಂದನೇ ತರಗತಿಯ ಚಿಕ್ಕ ಮಕ್ಕಳು ಮೂರು ಮತ್ತು ನಾಲ್ಕು ಕಿಲೋ ಮೀಟರ್ ಇರುವ ಹಂಪಸಾಗರ-2 ಶಾಲೆಗೆ ಹೋಗುವುದು ಬಹಳ ಕಷ್ಟ, ಹೀಗಾದರೆ ಮಕ್ಕಳು ಶಾಲೆಗೆ ಹೋಗುವುದನ್ನೇ ನಿಲ್ಲಿಸುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘140 ವಿದ್ಯಾರ್ಥಿಗಳು ಇರುವ ಹಂಪಸಾಗರ-3 ಶಾಲೆಯನ್ನು ಸಹ ಮುಚ್ಚಲಾಗುತ್ತಿದೆ. ಈಗಾಗಲೇ ಮುಚ್ಚುವ ಶಾಲೆಗಳ ಪಟ್ಟಿಯನ್ನು ಬಿಟ್ಟಿದ್ದಾರೆ. ನಮ್ಮ ಜಿಲ್ಲೆಯಲ್ಲಿಯೇ 738 ಶಾಲೆಗಳನ್ನು ಮುಚ್ಚಲಾಗುತ್ತಿದೆ, ಇದರ ಬಗ್ಗೆ ಪೋಷಕರು ಎಚ್ಚರದಿಂದ ಇರಬೇಕು’ ಎಂದರು.</p>.<p>ಸಂಘಟನೆಯ ಜಿಲ್ಲಾ ಸದಸ್ಯೆ ಉಮಾದೇವಿ, ಗ್ರಾಮಸ್ಥರಾದ ವಿನಾಯಕ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್, ಶ್ರೀನಿವಾಸ್, ಹನುಮಂತಪ್ಪ, ಕರಿಬಸಪ್ಪ, ನಾಗರಾಜ್, ನಿಂಗಪ್ಪ, ಕೃಷ್ಣಪ್ಪ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>